Home Mangalorean News Kannada News ಅಂತರ್ ಜಿಲ್ಲಾ ಕುಖ್ಯಾತ ಜಾನುವಾರು ಕಳ್ಳನ ಬಂಧನ

ಅಂತರ್ ಜಿಲ್ಲಾ ಕುಖ್ಯಾತ ಜಾನುವಾರು ಕಳ್ಳನ ಬಂಧನ

Spread the love

ಅಂತರ್ ಜಿಲ್ಲಾ ಕುಖ್ಯಾತ ಜಾನುವಾರು ಕಳ್ಳನ ಬಂಧನ

ಮಂಗಳೂರು: ಕೊಲೆ, ಕೊಲೆ ಯತ್ನ ಜಾನುವಾರು ಕಳ್ಳತನ ಮುಂತಾದ 25 ಪ್ರಕರಣಗಳಲ್ಲಿ ಭಾಗಿಯಾಗಿದ್ದ ,ಸುಮಾರು 10 ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೇ ತಪ್ಪಿಸಿಕೊಂಡಿದ್ದ ಆರೋಪಿಯನ್ನು ರೌಡಿ ನಿಗ್ರಹದಳದ ಪೋಲಿಸರು ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ತಾಲೂಕು ಪುದು ಗ್ರಾಮದ ಅಮ್ಮೆಮಾರ್ ಇಮ್ರಾನ್ @ಕುಟ್ಟ (24) ಎಂದು ಗುರುತಿಸಲಾಗಿದೆ.

ಬಂಧಿತನು ದನ ಕಳವು ಮಾಡಲು ಉಪಯೋಗಿಸಿದ ಮಾರುತಿ ಓಮ್ನಿ ಕೆ 19 ಎಂಸಿ 6252 ಸಮೇತ ಈ ದಿನ ಖಚಿತ ವರ್ತಮಾನದ ಮೇರೆಗೆ ಆರ್ಕುಳ ಗೇಟ್ ಬಳಿ ಮಂಗಳೂರು ದಕ್ಷಿಣ ಎ.ಸಿ.ಪಿ ರಾಮರಾವ್ ನೇತೃತ್ವದ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ಆರೋಪಿ ಇಮ್ರಾನ್ ಮೇಲೆ ಸುಮಾರು 25 ಜಾನುವಾರು ಕಳ್ಳತನ ಪ್ರಕರಣಗಳು ನಗರದ ವಿವಿಧ ಠಾಣೆಗಳಲ್ಲಿ ಮತ್ತು ಕೊಡಗು ಜಿಲ್ಲೆಯಲ್ಲಿ ದಾಖಲಾಗಿರುತ್ತದೆ. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿ 3 ಜಾನುವಾರು ಕಳ್ಳತನ ಪ್ರಕರಣ , ಬಜ್ಪೆ ಠಾಣೆಯಲ್ಲಿ ಒಂದು ಜಾನುವಾರು ಕಳ್ಳತನ ಪ್ರಕರಣ , ಕೊಣಾಜೆ ಠಾಣಾ ಸರಹದ್ದಿನಲ್ಲಿ 3 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು, ಬಂಟ್ವಾಳ ಠಾಣಾ ಸರಹದ್ದಿನಲ್ಲಿ 8 ಪ್ರಕರಣದಲ್ಲಿ ದಾಖಲಾಗಿರುತ್ತದೆ. 2017 ರಲ್ಲಿ ಕೊಡಗು ಜಿಲ್ಲೆಯಲ್ಲಿ ಈತನ ವಿರುದ್ದ 7 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಇದರಲ್ಲಿ ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಜಾನುವಾರು ಕಳ್ಳತನ ಸಮಯ 2 ಕೊಲೆಯತ್ನ ಪ್ರಕರಣ ಮತ್ತು ಒಂದು ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ 3 ಜಾನುವಾರು ಕಳ್ಳತನ ಪ್ರಕರಣ ಮತ್ತು ಸೋಮವಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಜಾನುವಾರು ಕಳ್ಳತನ ಪ್ರಕರಣವು ದಾಖಲಾಗಿರುತ್ತದೆ.ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಈತನ ವಿರುದ್ದ 2 ಪ್ರಕರಣ ದಾಖಲಾಗಿರುತ್ತದೆ. ಲಾರಿ ಚಾಲಕನ ಕೊಲೆ ಮತ್ತು ವಾಹನ ಕಳ್ಳತನ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣಗಳಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ 3 ಜಾನುವಾರು ಕಳ್ಳತನ ಪ್ರಕರಣ ಮತ್ತು ಕೊಡಗು ಜಿಲ್ಲೆಯ 7 ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಆರೋಪಿಯು ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದನು .ಸುಮಾರು ಒಂದು ತಿಂಗಳ ಹಿಂದೆ ಈತನ ಸಹಚರನಾದ ನಿಝಾಮ್ ಎಂಬಾತನನ್ನು ರೌಡಿ ನಿಗ್ರಹ ದಳದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ

ಈ ಕಾರ್ಯಾಚರಣೆಯಲ್ಲಿ ಮಾನ್ಯ ಪೊಲೀಸ್ ಆಯುಕ್ತರಾದ ಟಿ.ಆರ್ ಸುರೇಶ್ ಐಪಿಎಸ್ ರವರ ಆದೇಶದಂತೆ ಡಿಸಿಪಿಯವರಾದ ಹನುಮಂತರಾಯ.ಐಪಿಎಸ್ ಮತ್ತು ಉಮಾ ಪ್ರಶಾಂತರವರ ನಿರ್ದೇಶನದಂತೆ, ದಕ್ಷಿಣ ರೌಡಿ ನಿಗ್ರಹದಳದ ಎಸಿಪಿ ರಾಮರಾವ್ ಮತ್ತು ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಹಾಗು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.


Spread the love

Exit mobile version