ಅಕ್ರಮವಾಗಿ ರಕ್ತ ಚಂದನ ಸಾಗಾಟ ; ವ್ಯಕ್ತಿಯ ಬಂಧನ

Spread the love

ಅಕ್ರಮವಾಗಿ ರಕ್ತ ಚಂದನ ಸಾಗಾಟ ; ವ್ಯಕ್ತಿಯ ಬಂಧನ

ಮಂಗಳೂರು: ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರು ಸವಣೂರು ಗ್ರಾಮದ ನಿವಾಸಿ ಅಬ್ಬು ಚಾಪಳ್ಳ @ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ.

ಶನಿವಾರ 11.00 ಗಂಟೆಗೆ ವಿಟ್ಲ ಕಸಬ ಎಂಬಲ್ಲಿ ಅನುಮಾನಸ್ಪದವಾಗಿ ಕಂಡ ವ್ಯಕ್ತಿಯನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ ತೆರಳಿ ವಿಚಾರಿಸಲಾಗಿ ಆತನ ಬಳಿ ಪ್ಲಾಸ್ಟಿಕ್ ಚೀಲವೊಂದರಲ್ಲಿ ರೂ 24,200/- ಮೌಲ್ಯದ 12.100 ಕಿಲೋ ಗ್ರಾಂ ತೂಕದ ರಕ್ತ ಚಂದನದ ಮರದ ತುಂಡು ದೊರಕಿದ್ದು, ಯಾವುದೇ ಸಾಗಟ ಪರವಾನಗಿ ಹೊಂದಿರದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಿಸಲಾಗಿ , ಸದರಿ ವ್ಯಕ್ತಿಯು ಸಯ್ಯದ್ ಎಂಬಾತನಿಂದ ರಕ್ತಚಂದನ ಪಡೆದಿರುವುದಾಗಿ ತಿಳಿಸಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ

ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love