ಅಕ್ರಮ ಜೂಜಾಟ ಅಡ್ಡೆಗೆ ದಾಳಿ: 13 ಮಂದಿ ಸೆರೆ

Spread the love

ಅಕ್ರಮ ಜೂಜಾಟ ಅಡ್ಡೆಗೆ ದಾಳಿ: 13 ಮಂದಿ ಸೆರೆ

ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಅಂದರ್ – ಬಾಹರ್ ಎಂಬ ಜೂಜಾಟವಾಡುತ್ತಿದ್ದ 13 ಜನರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ದಿನಾಂಕ: 29-10-2018 ರಂದು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಎಂಬಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಜೂಜಾಟವಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿ ಜೂಜಾಟದಲ್ಲಿ ನಿರತರಾಗಿದ್ದ ನಿತ್ಯಾನಂದ ಶೆಟ್ಟಿ, ಸುಜಯ್ ಎಸ್ ಶೆಟ್ಟಿ, ಲಾನ್ಸಿ ಡಿ ಸೋಜಾ, ಕಾರ್ತಿಕ್ ದಿನೇಶ್ ಅಂಚನ್, ರಘು ಎನ್ ಕೆ, ಅವಿನಾಶ್, ಮಹೇಶ್ ಕುಮಾರ್ ಶೆಟ್ಟಿ, ದೀಕ್ಷಿತ್ ಕುಮಾರ್, ಗಣೇಶ ಕುಮಾರ್, ದೀಪಕ್ ಶೆಟ್ಟಿ, ಮೊಹಮ್ಮದ್ ಮುಸ್ತಾಫ, ಕೌಶಿಕ್ ಗೌಡ, ಮೊಹಮ್ಮದ್ ಹನೀಫ್ ಎಂಬವರನ್ನು ವಶಕ್ಕೆ ಪಡೆದುಕೊಂಡು, ಅವರ ವಶದಿಂದ ನಗದು ಹಣ ರೂ. 16,800/- ಹಾಗೂ ಜೂಜಾಟಕ್ಕೆ ಉಪಯೋಗಿಸಿದ ಇಸ್ಪೀಟ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಆರೋಪಿ ವಿಶ್ವಾಸ್ ಎಂಬಾತನು ದಾಳಿ ಸಮಯ ಓಡಿ ಹೋಗಿರುತ್ತಾನೆ. ಜೂಜಾಟವಾಡುತ್ತಿದ್ದವರನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ ಪಿಎಸ್ಐಯವರಾದ ಶ್ಯಾಮ ಸುಂದರ್, ಹೆಚ್.ಡಿ.ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love