Home Mangalorean News Kannada News ಅಣ್ಣ ತಮ್ಮಂದಿರ ನಡುವೆ ಗಲಾಟೆ – ಚೂರಿಯಿಂದ ಇರಿದು ಓರ್ವನ ಕೊಲೆ

ಅಣ್ಣ ತಮ್ಮಂದಿರ ನಡುವೆ ಗಲಾಟೆ – ಚೂರಿಯಿಂದ ಇರಿದು ಓರ್ವನ ಕೊಲೆ

Spread the love

ಅಣ್ಣ ತಮ್ಮಂದಿರ ನಡುವೆ ಗಲಾಟೆ – ಚೂರಿಯಿಂದ ಇರಿದು ಓರ್ವನ ಕೊಲೆ

ಮಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿ ಅಣ್ಣ ತಮ್ಮಂದಿರ ನಡುವೆ ಗಲಾಟೆ ನಡೆದು ಒರ್ವನನ್ನು ಇರಿದು ಕೊಲೆಗೈದ ಘಟನೆ ಮಂಗಳೂರು ಬೆಂಗ್ರೆ ಸಮೀಪ ನಡೆದಿದೆ.

ಮೃತ ವ್ಯಕ್ತಿಯನ್ನು ಬೆಂಗ್ರೆ ನಿವಾಸಿ ಮುಸ್ತಾಫ ಎಂದು ಗುರುತಿಸಲಾಗಿದ್ದು, ಕೊಲೆಗೈದ ವ್ಯಕ್ತಿಯನ್ನು ಮುಸ್ತಾಫನ ಸಹೋದ ರೈಜು ಯಾನೆ ಅಬ್ದುಲ್ ರಹಮಾನ್ ಎಂದು ಗುರುತಿಸಲಾಗಿದೆ.

ಮಂಗಳೂರು ತಾಲೂಕಿನ ಬೆಂಗ್ರೆಯ ಕಸಬಾ ಬೆಂಗ್ರೆ ಕಿಲಾರಿ ಮಸೀದಿ ಸಮೀಪ ಆಸ್ತಿಯ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದಿದ್ದು, ಮಂಗಳವಾರ ರಾತ್ರಿ ಕೂಡ ತಾಯಿ ಹಾಗೂ ತಂಗಿಯ ಮನೆಯ ವಿಚಾರದಲ್ಲಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ವೇಳೆ ತಾಯಿ ಹಾಗೂ ಇವರ ಬಾವ ಗಲಾಟೆ ಬಿಡಿಸಲು ಪ್ರಯತ್ನಿಸಿದ್ದ ವೇಳೆ ಆರೋಪಿ ಅಬ್ದುಲ್ ರೆಹಮಾನ್ ತನ್ನ ಬಳಿ ಇದ್ದ ಚೂರಿಯಿಂದ ಮುಸ್ತಾಫನಿಗೆ ಇರಿದು ಪರಾರಿಯಾಗಿದ್ದಾನೆ.

ಗಂಭೀರವಾಗಿ ಗಾಯಗೊಂಡ ಮುಸ್ತಾಫನನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪಣಂಬೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

Exit mobile version