ಅತ್ತೂರು ಬಾಸಿಲಿಕಾ ಮಹೋತ್ಸವಕ್ಕೆ ಮುಖ್ಯಮಂತ್ರಿಗೆ ಆಹ್ವಾನ

Spread the love

ಅತ್ತೂರು ಬಾಸಿಲಿಕಾ ಮಹೋತ್ಸವಕ್ಕೆ ಮುಖ್ಯಮಂತ್ರಿಗೆ ಆಹ್ವಾನ

ಕಾರ್ಕಳ: ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದ ವಾರ್ಷಿಕಮಹೋತ್ಸವಕ್ಕೆ ಮುಖ್ಯಮಂತ್ರಿ ಹೆ ಚ್ ಡಿ ಕುಮಾರಸ್ವಾಮಿಯವರಿಗೆ ಬುಧವಾರ ಚರ್ಚಿನ ಆಡಳಿತ ಮಂಡಳಿ ಭೇಟಿಯಾಗಿ ಆಹ್ವಾನ ನೀಡಿತು.

ಚರ್ಚಿನ ಆಡಳಿತ ಮಂಡಳಿಯ ಪರವಾಗಿ ಸಂತೋಶ್ ಡಿ’ಸಿಲ್ವಾ ಮತ್ತು ಮಾಜಿ ಶಾಸಕ ಗೋಪಾಲ ಭಂಡಾರಿ, ಕೆಪಿಸಿಸಿ ಕಾರ್ಯದರ್ಶಿ ಜಿ ಎ ಬಾವಾ ಅವರನ್ನು ಒಳಗೊಂಡ ತಂಡ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆಹ್ವಾನ ನೀಡಿತು.

ಜನವರಿ 27 ರಿಂದ 31 ರ ವರೆಗೆ ಬಾಸಿಲಿಕಾದ ವಾರ್ಷಿಕ ಮಹೋತ್ಸವ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಡಾ ಜಯಮಾಲಾ, ಅಲ್ಪಸಂಖ್ಯಾತ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಅವರು ಭಾಗವಹಿಸುವುದಾಗಿ ಭರವಸೆ ನೀಡಿದ್ದಾರೆ.

ಇದರೊಂದಿಗೆ ಸಮಿತಿಯ ಸದಸ್ಯರು ಸಚಿವರಾದ ಕೆ ಜೆ ಜಾರ್ಜ್, ಸಾರಾ ಮಹೇಶ್, ಯು ಟಿ ಖಾದರ್, ಶಾಸಕರಾದ ವೇದವ್ಯಾಸ ಕಾಮತ್, ರಘುಪತಿ ಭಟ್ ಇವರುಗಳಿಗೆ ಸಹ ಮಹೋತ್ಸವಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದ್ದಾರೆ.


Spread the love