ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಮಹೋತ್ಸವಕ್ಕೆ ಸಿದ್ದರಾಮಯ್ಯರಿಗೆ ಆಹ್ವಾನ

Spread the love

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಮಹೋತ್ಸವಕ್ಕೆ ಸಿದ್ದರಾಮಯ್ಯರಿಗೆ ಆಹ್ವಾನ

ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ನಿರ್ದೇಶಕರಾದ ವಂ| ಆಲ್ಬನ್ ಡಿ’ಸೋಜಾ ಮತ್ತು ಉಪಾಧ್ಯಕ್ಷರಾದ ಸಂತೋಷ್ ಡಿಸಿಲ್ವಾ ಅವರು ಗೃಹ ಕಚೇರಿಯಲ್ಲಿ ಭೇಟಿ ಮಾಡಿ 20024 ಜನವರಿ ಕೊನೆಯ ವಾರದಲ್ಲಿ ನಡೆಯಲಿರುವ ಬಸಿಲಿಕಾದ ವಾರ್ಷಿಕ ಮಹೋತ್ಸವಕ್ಕೆ ಆಹ್ವಾನ ನೀಡಿದರು.

ಆಹ್ವಾನವನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಮಹೋತ್ಸವದಲ್ಲಿ ಭಾಗವಹಿಸುವ ಭರವಸೆ ನೀಡಿದರು.

ಇದೇ ವೇಳೆ ನಾಯಕರು ಕ್ರಿಸ್ಮಸ್ ಶುಭಾಶಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡು ಕ್ರಿಸ್ಮಸ್ ಹಬ್ಬದ ತಿಂಡಿ ತಿನಿಸು (ಕುಸ್ವಾರ್) ಮತ್ತು ಕೇಕ್ ಗಳನ್ನು ನೀಡಿ ಶುಭಾಶಯ ಕೋರಿದರು.


Spread the love