ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ: ದೀಪಕ್ ಸಹಿತ ಮೂವರು ಪೊಲೀಸ್ ವಶಕ್ಕೆ
ಮಂಗಳೂರು: ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಆರೋಪದ ಮೇರೆಗೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ
ವಶಕ್ಕೆ ಪಡೆದವರನ್ನು ಬಂಟ್ವಾಳ ತಾಲೂಕು ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪ್ರಥ್ವಿರಾಜ್ (21) ಮತ್ತು ಚಿಂತನ್ (19) ಎಂದು ಗುರುತಿಸಲಾಗಿದೆ.
ಮೇ 27 ರಂದು ಮಧ್ಯಾಹ್ನ ಸಮಯದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ಗ್ರಾಮಾಂತರ ಠಾಣಾ ಅ ಕ್ರ 54/2025 00: 191[1], 191[2], 191[3], 118[1]. 118 [2], 109, 103 3 190 BNS 2023 ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದಲ್ಲಿ ಆರೋಪಿಗಳ ಶೀಘ್ರ ಪತ್ತೆಗಾಗಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರನ್ನು ಪ್ರಕರಣದ ತನಿಖಾಧಿಕಾರಿಯನ್ನಾಗಿ ನೇಮಿಸಿ, 05 ತನಿಖಾ ತಂಡಗಳನ್ನು ರಚಿಸಿ ಆರೋಪಿ ಪತ್ತೆಕಾರ್ಯ ನಡೆಸಲಾಗಿರುತ್ತದೆ. ಸದ್ರಿ ತನಿಖಾ ತಂಡವು ಮೇ 29 ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯವು ಪ್ರಗತಿಯಲ್ಲಿರುತ್ತದೆ