ಅಮ್ಮಣಿ ರಾಮಣ್ಣ ಶೆಟ್ಟಿ ಹಾಲ್ ನಲ್ಲಿ ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಯಾದ ಕಾಂಗ್ರೆಸ್ ಕಾರ್ಯಕರ್ತರು

Spread the love

ಅಮ್ಮಣಿ ರಾಮಣ್ಣ ಶೆಟ್ಟಿ ಹಾಲ್ ನಲ್ಲಿ ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಯಾದ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿ: ನೂತನವಾಗಿ ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವ ಡಿ ಕೆ ಶಿವಕುಮಾರ್ ಹಾಗೂ ಕಾರ್ಯಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಮ್ ಅಹಮದ್ರವರ ಪದಗ್ರಹಣ ಕಾರ್ಯಕ್ರಮ ” ಪ್ರತಿಜ್ಞಾ ದಿನ ” ಕಾರ್ಯಕ್ರಮವು ಉಡುಪಿಯ ಶ್ರೀಮತಿ ಅಮ್ಮಣಿ ರಾಮಣ್ಣ ಶೆಟ್ಟಿ ಹಾಲ್ ನಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರವನ್ನು ಅಳವಿಡಿಸಿದ್ದ ಬೃಹತ್ ಟಿವಿ ಪರದೆಯಲ್ಲಿ ಲೈವ್ ವೀಕ್ಷಣೆ ಮಾಡುವ ಮೂಲಕ ಪ್ರದಗ್ರಹಣ ಸಮಾರಂಭವನ್ನು ಸಾಕ್ಷಿಕರಿಲಾಯಿತು.

ಚೈನಾ ಗಡಿಯಲ್ಲಿ ಸಾವನಪ್ಪಿದ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿ ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸುವ ಮೂಲಕ ಪ್ರತಿಜ್ಞಾ ದಿನ ಸಮಾರಂಭ ನಡೆಯಿತು. ಈ ವೇಳೆ ನಾಯಕರು ದೀಪ ಬೆಳಗಿಸುವ ಮೂಲಕ ಜಿಲ್ಲೆಯಲ್ಲಿ ಚಾಲನೆ ನೀಡಿದರು. ಅಲ್ಲದೆ ಸಂವಿಧಾನದ ಪೀಠಿಕೆಯ ಮೇಲೆ ಪ್ರಮಾಣವಚನ ಹಾಗೂ ಕಾಂಗ್ರೆಸ್ ಪಕ್ಷದ ಧ್ಯೇಯಗಳ ಮೇಲೆ ಪ್ರತಿಜ್ಞೆ ಮಾಡಲಾಯಿತು.

ಕಾರ್ಯಕ್ರಮದ ನೇತೃತ್ವವನ್ನು ರಮೇಶ್ ಕಾಂಚನ್, ಚಂದ್ರಮೋಹನ್, ವಿಜಯ ಪೂಜಾರಿ, ಜ್ಯೋತಿ ಹೆಬ್ಬಾರ್, ಪ್ರಣಮ್, ಹಿಲ್ಲಾರಿ ಜತ್ತನ್ನಾ ವಹಿಸಿದ್ದರು.

ಈ ವೇಳೆ ವಿಘ್ನೇಶ್ ಕಿಣಿ, ಚಂದ್ರಿಕಾ ಶೆಟ್ಟಿ, ನರಸಿಂಹ ಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love