Home Mangalorean News Kannada News ಅಯೋಧ್ಯೆ ತೀರ್ಪು; ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನ. 9 ರಂದು ನಿಷೇಧಾಜ್ಞೆ ಜಾರಿ

ಅಯೋಧ್ಯೆ ತೀರ್ಪು; ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನ. 9 ರಂದು ನಿಷೇಧಾಜ್ಞೆ ಜಾರಿ

Spread the love

ಅಯೋಧ್ಯೆ ತೀರ್ಪು; ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನ. 9 ರಂದು ನಿಷೇಧಾಜ್ಞೆ ಜಾರಿ

ಮಂಗಳೂರು : ಸರ್ವೋಚ್ಚ ನ್ಯಾಯಾಲಯವು ಅಯೋಧ್ಯೆ ವಿವಾದದ ಬಗ್ಗೆ ಅಂತಿಮ ತೀರ್ಪು ನೀಡುವ ಹಿನ್ನಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೆ ಗೊಳಿಸಿ ಕಮೀಷನರ್ ಡಾ ಹರ್ಷಾ ಆದೇಶ ಹೊರಡಿಸಿದ್ದಾರೆ.

ಅಯೋಧ್ಯೇ ತೀರ್ಪಿನ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕ ಶಾಂತಿ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನವೆಂಬರ್ 9 ರ ಬೆಳಿಗ್ಗೆ 10ರಿಂದ ನವೆಂಬರ್ 10 ಬೆಳಿಗ್ಗೆ 6 ಗಂಟೆಯ ವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಘಟಕದ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ರ ಅನ್ವಯ ನಿರ್ಬಂಧನ ಆಜ್ಞೆಯನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.


Spread the love

Exit mobile version