ಅಲ್ತಾರು ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿ ಚೇತನ್ ಶೆಟ್ಟಿ ಬಂಧನ

Spread the love

ಅಲ್ತಾರು ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣ: ಆರೋಪಿ ಚೇತನ್ ಶೆಟ್ಟಿ ಬಂಧನ

ಬ್ರಹ್ಮಾವರ: ಸಾಯಿಬ್ರ್ರಕಟ್ಟೆ ಸಮೀಪ ಅಲ್ತಾರಿನ ಕಾಜ್ರಳ್ಳಿ ನಿವಾಸಿ ಅನಿಶಾ ಪೂಜಾರಿ ಅಗಸ್ಟ್ 21ರಂದು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಚೇತನ್ ಶೆಟ್ಟಿ ಎಂಬಾತನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

‘ಆರೋಪಿ ಚೇತನ್ ಶೆಟ್ಟಿ ಅನಿಶಾಳನ್ನು ಹಲವು ವರ್ಷದಿಂದ ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ ಬೇರೆ ಹುಡುಗಿಯನ್ನು ಮದುವೆಯಾಗಲು ತಯಾರಿ ನಡೆಸುತ್ತಿದ್ದ. ಇದರಿಂದ ಮನನೊಂದ ಈಕೆ ಆತ್ಮಹತ್ಯೆ ಮಾಡಿದ್ದಳು’ ಎಂಬ ಡೆತ್ನೋಟ್ ಆಧಾರದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಲ್ಲವ ವೇದಿಕೆ ನೇತೃತ್ವದಲ್ಲಿ ಬಿಲ್ಲವ ಸಂಘಟನೆಗಳ ಸಹಕಾರದೊಂದಿಗೆ ಹೋರಾಟ ನಡೆದಿತ್ತು. ಆರೋಪಿಯನ್ನು ಬೆಂಗಳೂರಿನ ವಿಜಯನಗರದ ಮನೆಯೊಂದರಲ್ಲಿ ಬಂಧಿಸಿದ್ದಾರೆ.

ಉಡುಪಿ ಎಸ್ಪಿವಿಷ್ಣುವರ್ದನ ಅವರ ಮಾರ್ಗದರ್ಶನದ ಮೇರೆಗೆ ಬ್ರಹ್ಮಾವರ ಇನ್ಸ್ಪೆಕ್ಟರ್ ಆನಂತ ಪದ್ಮನಾಭ, ಪಿಎಸ್ಐ ರಾಘವೇಂದ್ರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.


Spread the love