Home Mangalorean News Kannada News ಆಗಸ್ಟ್ 26: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಆಗಸ್ಟ್ 26: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

Spread the love

ಆಗಸ್ಟ್ 26: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ಉಡುಪಿ : ಉಡುಪಿ ಜಿಲ್ಲಾ ಯುವ ಕಾಂಗ್ರೇಸ್ ಕಾರ್ಯಕಾರಿಣಿ ಸಭೆಯು ಆಗಸ್ಟ್ 26 ರ ಅಪರಾಹ್ನ 2:30ಕ್ಕೆ ಉಡುಪಿ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜರುಗಲಿದೆ.

ಈ ಸಭೆಗೆ ಭಾರತೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲಕೃಷ್ಣ , ಕರ್ನಾಟಕ ರಾಜ್ಯ ಯುವ ಕಾಂಗ್ರೇಸ್ ಉಪಾಧ್ಯಕ್ಷರಾದ ಕೆಂಪರಾಜ್ ಗೌಡ , ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷರಾದ ಮಿಥುನ್ ರೈ ಯವರು ಆಗಮಿಸಲಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲೆಯ ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಜಿಲ್ಲೆಯ ಯುವ ಕಾಂಗ್ರೆಸ್ ಪಧಾದಿಕಾರಿಗಳು, ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗು ಪದಾಧಿಕಾರಿಗಳು, ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳು, ಎಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾ, ವಿಧಾನಸಭಾ ಹಾಗೂ ಬ್ಲಾಕ್ ಮಟ್ಟದ ಸಂಯೋಜಕರುಗಳು ಕಡ್ಡಾಯವಾಗಿ ಹಾಜರಿರಬೇಕಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ವಿಶ್ವಾಸ್ ವಿ. ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version