ಆಧಾರ್ ಕಾರ್ಡ್ ನೋಂದಣೆ ಇನ್ನೂ ಒಂದು ತಿಂಗಳು ಮುಂದುವರಿಯಲಿದೆ: ಶಾಸಕ ಜೆ.ಆರ್.ಲೋಬೊ

Spread the love

ಆಧಾರ್ ಕಾರ್ಡ್ ನೋಂದಣೆ ಇನ್ನೂ ಒಂದು ತಿಂಗಳು ಮುಂದುವರಿಯಲಿದೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಜನರಿಗೆ ಉಪಯೋಗವಾಗಲೆಂದು ಆಧಾರ್ ಕಾರ್ಡ್ ಮಾಡುವ ವ್ಯವಸ್ಥೆಯನ್ನು ಮಾಡಿದ್ದು ಇಲ್ಲಿಯವರೆಗೆ ಹದಿನೈದು ಕಡೆಗಳಲ್ಲಿ ವ್ಯವಸ್ಥಿತವಾಗಿ ಮುಗಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.

ಅವರು ಕಂಕನಾಡಿ ಬಿ ವಾರ್ಡ್ ನ ಕಪಿತಾನಿಯಾ ಸರ್ಕಾರಿ ಶಾಲೆಯಲ್ಲಿ ಆಧಾರ್ ಕಾರ್ಡ್ ನೋಂದಾವಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಜನರು ಯಾವುದೇ ಕಾರಣಕ್ಕೂ ಬೇಸರ ಪಡದೆ ಆಧಾರ್ ಕಾರ್ಡ್ ಮಾಡಿಕೊಳ್ಳಬೇಕು. ಇದು ಇನ್ನೂ ಒಂದು ತಿಂಗಳು ಮಂಗಳೂರು ದಕ್ಷಿಣ ವಿಧಾನ ಸಭಾ ವ್ಯಾಪ್ತಿಯಲ್ಲಿ ಮುಂದುವರಿಯಲಿದೆ ಎಂದರು.

ಅನುಕೂಲವಾಗಲೆಂದು ಎರಡು ಯಂತ್ರಗಳನ್ನು ಅಳವಡಿಸಲಾಗಿದೆ. ಇನ್ನೂ ಹೆಚ್ಚಿನ ಯಂತ್ರಗಳನ್ನು ತರಿಸುವ ಪ್ರಯತ್ನವಾಗುತ್ತಿದೆ. ಅವೂ ಬಂದರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಶಾಸಕರು ಕೆಲ ಕಾಲ ಆಧಾರ್ ಕಾರ್ಡ್ ನೋಂದಣೆ ಕೇಂದ್ರದಲ್ಲಿದ್ದು ಅಲ್ಲಿನ ಕೆಲಸಗಳನ್ನು ನೋಡಿ ಪ್ರಸಂಶೆ ವ್ಯಕ್ತಪಡಿಸಿದರು.

ಇಂದು ಉಚಿತ ವೈದ್ಯಕೀಯ ಶಿಬಿರ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ, ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, 26 ನೇ ದೇರೆಬೈಲ್ ಕಾಂಗ್ರೆಸ್ ವಾರ್ಡ್ ಸಮಿತಿ ವತಿಯಿಂದ 9 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗಾಂಧಿ ನಗರ ದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ವೈದ್ಯಕೀಯ, ದಂತ ವೈದ್ಯಕೀಯ, ಮಹಿಳೆಯರಿಗೆ ಥೈರಾಯಿಡ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ಕೆ.ಎಮ್.ಸಿ ಆಸ್ಪತ್ರೆ, ಎ.ಜೆ.ಆಸ್ಪತ್ರೆ, ಫಾದರ್ ಮುಲ್ಲರ್ಸ್, ಕರ್ನಾಟಕ ಆಯುರ್ವೇದಿಕೆ, ಆಯುಷ ಇಲಾಖೆ, ಆಯುಷ ವೈದ್ಯಾಧಿಕಾರಿಗಳು, ಮಂಗಳೂರು ನಗರ ಪಾಲಿಕೆ, ನಗರ ಆರೋಗ್ಯ ಕೇಂದ್ರದವರು ಭಾಗವಹಿಸುತ್ತಾರೆ.

ಶಾಸಕ ಜೆ.ಆರ್.ಲೋಬೊ ಅವರ ನೇತ್ರತ್ವದಲ್ಲಿ ನಡೆಯಲಿರುವ ಈ ಶಿಬಿರದಲ್ಲಿ ಕಣ್ಣು, ಕಿವಿ, ಗಂಟಲು, ಮೂಳೆ, ಸ್ತ್ರೀ ರೀಗ, ಚರ್ಮ, ಸಾಮಾನ್ಯ ಕಾಯಿಲೆಗಳು ಹಾಗೂ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಲಾಗುವುದು.

ಶಿಬಿರದಲ್ಲಿ ಅಗತ್ಯವುಳ್ಳವರಿಗೆ ಓದುವ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಅವರು ವಿನಂತಿಸಿದ್ದಾರೆ.


Spread the love