ಆಸರೆ ಎಂಬ ವಿಶೇಷ ಆಪ್ತ ಸಮಾಲೋಚನಾ ಕೇಂದ್ರದ ಉದ್ಘಾಟನೆ
ಪುತ್ತೂರು : ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆ ಪುತ್ತೂರಿನಲ್ಲಿ ನೊಂದ ಮಹಿಳೆ ಮತ್ತು ಮಕ್ಕಳಿಗೆ ಆಪ್ತ ಸಮಾಚಲೋಚನೆ ನಡೆಸುವ ನಿಟ್ಟಿನಲ್ಲಿ ತೆರೆಯಲಾಗಿರುವ ಆಸರೆ ಎಂಬ ವಿಶೇಷ ಆಪ್ತ ಸಮಾಲೋಚನಾ ಕೇಂದ್ರದ ಉದ್ಘಾಟನಾ ಸಮಾರಂಭ ಜರುಗಿತು.
ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಆಪ್ತ ಸಮಾಲೋಚನಾ ಕೇಂದ್ರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ವಿವಿಧ ಇಲಾಖೆಯ ಗಣ್ಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು, ಸ್ವಸಹಾಯ ಸಂಘ ಮತ್ತು ಇತರ ಸೇವಾ ಸಂಸ್ಥೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.