ಈದ್-ಮಿಲಾದ್ ಹಬ್ಬ: ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು

Spread the love

ಈದ್-ಮಿಲಾದ್ ಹಬ್ಬ: ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು

ಮಂಗಳೂರು : ನವೆಂಬರ್ 20 ರಂದು ಮುಸ್ಲಿಂ ಧರ್ಮೀಯರು ಈದ್-ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಸದ್ರಿ ಹಬ್ಬದ ದಿನದಂದು ಸಾಮೂಹಿಕ ಪ್ರಾರ್ಥನೆ ನಡೆಯಲಿದ್ದು, ಸದ್ರಿ ಪ್ರದೇಶದ ಸುತ್ತಮುತ್ತ ಸೂಕ್ತ ಸಂಚಾರ ಸುವ್ಯವಸ್ಥೆ ಬಂದೋಬಸ್ತ್ ನಿರ್ವಹಿಸಬೇಕಾಗಿದ್ದು, ಕಾರ್ಯಕ್ರಮದ ಸಮಯ ಯಾವುದೇಅಹಿತಕರ ಘಟನೆಗಳು ನಡೆಯದಂತೆ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಸೂಚಿಸಿ ಪೊಲೀಸ್ ಆಯುಕ್ತರು ಮಂಗಳೂರು ನಗರ ಇವರು ಆದೇಶಿಸಿದ್ದಾರೆ.

ನವೆಂಬರ್ 20 ರಂದು 4 ಗಂಟೆಯಿಂದ ಪ್ರಾರ್ಥನೆ ಮುಗಿದು ಜನರು ಮತ್ತು ವಾಹನಗಳು ತೆರಳುವ ತನಕ ಹಂಪನಕಟ್ಟೆಯಿಂದ ಬಾವುಟಗುಡ್ಡೆಯ ಮುಖಾಂತರ ಡಾ. ಅಂಬೇಡ್ಕರ್ ವೃತ್ತಕ್ಕೆ ಚಲಿಸಬೇಕಾದ ವಾಹನಗಳು ಕೆ.ಎಸ್.ಆರ್. ರಸ್ತೆ ಯಾ ಎಲ್.ಹೆಚ್.ಹೆಚ್. ಮುಖಾಂತರ ಫಳ್ನೀರ್ ರಸ್ತೆಯ ಮೂಲಕ ಸಂಚರಿಸುವುದು.

ಅದೇ ರೀತಿ ಅರವಿಂದ ಕಡೆಯಿಂದ ಸಿಟಿ ಸೆಂಟರ್‍ನಿಂದ ಬಾವುಟಗುಡ್ಡೆಗೆ ಬರುವ ರಸ್ತೆ(ಕೆ.ಎಸ್.ಆರ್. ರಸ್ತೆಯಿಂದ ಹಾಗೂ ಸಿಟಿ ಸೆಂಟರ್ ಪಾರ್ಕಿಂಗ್‍ನಿಂದ ಬಾವುಟಗುಡ್ಡೆಗೆ ಬರುವ ರಸ್ತೆಗಳಲ್ಲಿ ಮೇಲ್ಕಣಿಸಿದ ಸಮಯದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಬಾವುಟಗುಡ್ಡೆ ರಸ್ತೆಯಲ್ಲಿ ಸಾಧ್ಯವಾದಷ್ಟು ರಸ್ತೆಯ ಬದಿಯಲ್ಲಿ ವಾಹನಗಳನ್ನು 45 ಡಿಗ್ರಿ ಕೋನದಲ್ಲಿ ತಾತ್ಕಾಲಿಕವಾಗಿ ಪಾರ್ಕ್ ಮಾಡುವುದು. ಹಂಪನಕಟ್ಟೆಯಿಂದ ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿದೆ.
ಅದೇ ರೀತಿ ನಗರ ಕೇಂದ್ರ ಗ್ರಂಥಾಲಯದಿಂದ ವಿಜಯಾ ಬ್ಯಾಂಕ್ ತನಕ ರಸ್ತೆಯ ಎಡಬದಿ ಮಾತ್ರ ವಾಹನಗಳನ್ನು ತಾತ್ಕಾಲಿಕವಾಗಿ ಪಾರ್ಕ್ ಮಾಡುವುದು.


Spread the love