Home Mangalorean News Kannada News ಉಡುಪಿ: ಎ.10 ರಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ

ಉಡುಪಿ: ಎ.10 ರಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ

Spread the love

ಉಡುಪಿ: ಎ.10 ರಂದು ಬಿಜೆಪಿಯಿಂದ ಜನಾಕ್ರೋಶ ಯಾತ್ರೆ

ಉಡುಪಿ: ರಾಜ ಸರಕಾರದ ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ನಾಳೆ ನಗರದಲ್ಲಿ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿಯ ಜಿಲ್ಲಾಧ್ಯಕ್ಷ ಕಿಶೋರ್ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಪ್ರತಿದಿನ ಜನತೆಗೆ ಬೆಲೆ ಏರಿಕೆಯ ಬಿಸಿಯನ್ನು ನೀಡುತ್ತಿದೆ. ಜೊತೆಗೆ ದಿನಕ್ಕೊಂದು ಭ್ರಷ್ಟಾಚಾರದ ಹಗರಣ ಹೊರಬೀಳುತ್ತಿದೆ ಎಂದವರು ಆರೋಪಿಸಿದರು.

ಶ್ರೀಕೃಷ್ಣ ಮಠದ ರಾಜಾಂಗಣದಿಂದ ಜನಾಕ್ರೋಶ ಯಾತ್ರೆ ಬೆಳಗ್ಗೆ 9:30ಕ್ಕೆ ಪ್ರಾರಂಭಗೊಳ್ಳಲಿದ್ದು, ಕಲ್ಸಂಕ ಜಂಕ್ಷನ್ ಮೂಲಕ ಜಿಲ್ಲಾ ಬಿಜೆಪಿ ಕಚೇರಿ ಎದುರು ಮುಕ್ತಾಯಗೊಳ್ಳಲಿದೆ. ಸಮೀಪದ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಇದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಮಂಡಲದಲ್ಲಿ ವಿಪಕ್ಷ ನಾಯಕರಾದ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ಸಹಿತ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಕೆ.ಉದಯಕುಮಾರ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.


Spread the love

Exit mobile version