ಉಡುಪಿ: ಕರ್ನಾಟಕ ಕಾರ್ಮಿಕರ ವೇದಿಕೆ ವತಿಯಿಂದ ಅಜ್ಜರಕಾಡು ಆಸ್ಪತ್ರೆಯಲ್ಲಿ ಬೃಹತ್ ಪ್ರತಿಭಟನೆ

Spread the love

ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಹಲವಾರು ವಿಷಯಗಳಲ್ಲಿ ಸಂಬಂಧ ಪಟ್ಟವರಿಗೆ ಮನವಿಸಲ್ಲಿಸುತ್ತಿದ್ದು, ಸಾಮಾನ್ಯ ಜನರಿಗೆ ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ, ಬಡ ಜನರಿಗೆ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಸಿಗದೆ ಒದ್ದಾಡುತ್ತಿದ್ದರಿಂದ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವಂತೆ ಕರ್ನಾಟಕ ಕಾರ್ಮಿಕರ ವೇದಿಕೆಯಿಂದ 29-01-2016ರ ಶುಕ್ರವಾರ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ
ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಬೇಡಿಕೆಗಳು:-
1. ಸಿ.ಸಿ ಕ್ಯಾಮರಾ ಅಳವಡಿಸಬೇಕು
2. ಹಗಲು ಇರುಳು ಕಾವಲುಗಾರರನ್ನು ನೇಮಿಸಬೇಕು
3. ಅಯಾಯ ಕಾಯಿಲೆಗಳಿಗೆ ಸಂಬಂಧಪಟ್ಟ ವೈದ್ಯರನ್ನು ನೇಮಿಸುವುದು.
4. ಶೂಶ್ರೂಷಿಯರ ಸೇವೆ.
5. ರಕ್ತನಿಧಿ ಘಟಕವು ಹಗಲುರಾತ್ರಿ ಕಾರ್ಯನಿರ್ವಹಿಸುವಂತೆ ಮಾಡುವುದು.
6. ತುರ್ತು ಚಿಕಿತ್ಸೆ ವಿಭಾಗದ ಮುಖ್ಯದ್ವಾರದ ರಸ್ತೆಯನ್ನು ಸರಿಪಡಿಸುವುದು ಮತ್ತು ಈ ಎಲ್ಲಾ ಸೌಲಭ್ಯಗಳನ್ನು ಸರಿಯಾಗಿ ನೀಡದವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಈ ಎಲ್ಲಾ ಜನಪಯೋಗಿ ಕಾರ್ಯಕ್ಕೆ ಸಂಬಂಧಪಟ್ಟವರು ಸ್ಪಂದಿಸದಿದ್ದಲ್ಲಿ ವೇದಿಕೆಯು ಪ್ರತಿಭಟನೆಯೊಂದಿಗೆ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ವೇದಿಕೆಯ ಜಿಲ್ಲಾಧ್ಯಕ್ಷರಾದ ರವಿಶೆಟ್ಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love