Home Mangalorean News Kannada News ಉಡುಪಿ ಜಿಲ್ಲಾ ಕಾಂಗ್ರೆಸ್ ಒಬಿಸಿ ವಿಭಾಗ ಅಧ್ಯಕ್ಷರಾಗಿ ಯತೀಶ್ ಕರ್ಕೇರಾ

ಉಡುಪಿ ಜಿಲ್ಲಾ ಕಾಂಗ್ರೆಸ್ ಒಬಿಸಿ ವಿಭಾಗ ಅಧ್ಯಕ್ಷರಾಗಿ ಯತೀಶ್ ಕರ್ಕೇರಾ

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್ ಒಬಿಸಿ ವಿಭಾಗ ಅಧ್ಯಕ್ಷರಾಗಿ ಯತೀಶ್ ಕರ್ಕೇರಾ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ ಯತೀಶ್ ಕರ್ಕೇರ ಅವರನ್ನು ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಅಧ್ಯಕ್ಷ ವೇಣುಗೋಪಾಲ ಅವರು ನೇಮಕ ಮಾಡಿದ್ದಾರೆ.

yathish-karkera-udupi

ಯತೀಶ್ ಕರ್ಕೆರ ಅವರು 20 ವರ್ಷಗಳಿಂದ ಕಾಂಗ್ರೆಸಿನ ಸಕ್ರಿಯ ಕಾರ್ಯಕರ್ತರಾಗಿದ್ದು ತೆಂಕನಿಡಿಯೂರು ಗ್ರಾಮಪಂಚಾಯತ್ ಅಧ್ಯಕ್ಷರಾಗಿ, ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷಾಗಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ಕರ್ಕೇರ ಅವರನ್ನು ನೇಮಕ ಮಾಡುವಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ್‍ಚಂದ್ರ ಶೆಟ್ಟಿ, ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಮತ್ತು ಹಿಂದಿನ ಸಾಲಿನ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾಗಿದ್ದ ಕೇಶವ ಎಂ. ಕೋಟ್ಯಾನ್ ಅವರು ಸಹಕರಿಸಿದ್ದರು.


Spread the love

Exit mobile version