Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ ಮರಳುಗಾರಿಕೆಗೆ ರಾಜ್ಯ ಸರ್ಕಾರದಿಂದ ಅನುಮತಿ – ರಘುಪತಿ ಭಟ್

ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ ಮರಳುಗಾರಿಕೆಗೆ ರಾಜ್ಯ ಸರ್ಕಾರದಿಂದ ಅನುಮತಿ – ರಘುಪತಿ ಭಟ್

Spread the love

ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ ಮರಳುಗಾರಿಕೆಗೆ ರಾಜ್ಯ ಸರ್ಕಾರದಿಂದ ಅನುಮತಿ – ರಘುಪತಿ ಭಟ್

ಉಡುಪಿ: ಹಲವು ಸಮಯಗಳಿಂದ ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡಿದ್ದು ಪುನರ್ ಆರಂಭಿಸುವಂತೆ ಹಾಗೂ ಮಳೆಗಾಲದಲ್ಲಿ ಜೂನ್ ನಿಂದ ಸಪ್ಟೆಂಬರ್ ತಿಂಗಳ ವರೆಗಿನ ನಿಷೇಧವನ್ನು ಪುನರ್ ಪರಿಶೀಲಿಸುವಂತೆ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಆಗಸ್ಟ್ 1 ರಿಂದ ಮರಳುಗಾರಿಕೆ ಪ್ರಾರಂಭಿಸಲು ಅನುಮತಿ ನೀಡುವಂತೆ ಕೋರಿದ್ದು, ಅದರಂತೆ ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು ಶಾಸಕರ ಮನವಿಯನ್ನು ಪುರಸ್ಕರಿಸಿ ಉಡುಪಿ ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಮೀನುಗಾರಿಕೆ ನಿಷೇಧ ಇರುವುದರಿಂದ ಆ ಸಮಯದವರೆಗೆ ಮಾತ್ರ ಮರಳುಗಾರಿಕೆ ನಿಷೇಧಿಸಿ ಆಗಸ್ಟ್ ತಿಂಗಳಿನಿಂದ ಮರಳುಗಾರಿಕೆ ಆರಂಭಿಸಲು ಸಿ ಆರ್ ಜಡ್ ಕ್ಲಿಯರೆನ್ಸ್ ನೀಡಲಾದ ಸರಕಾರದ ಪತ್ರದಲ್ಲಿ ವಿಧಿಸಿರುವ ಹೆಚ್ಚುವರಿ ಶರತ್ತನ್ನು ಮಾರ್ಪಾಡುಗೊಳಿಸಿ ಮೀನುಗಾರಿಕಾ ನಿಷೇಧದ ಅವಧಿಯಾದ ಜೂನ್ 1 ರಿಂದ ಜುಲೈ 31 ರ ವರೆಗೆ ಮಾತ್ರ ಮರಳುಗಾರಿಕೆ ಯನ್ನು ನಿಷೇಧಿಸಿ ಆಗಸ್ಟ್ ನಿಂದ ಮರಳುಗಾರಿಕೆ ಯನ್ನು ಆರಂಭಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ಶಾಸಕರಾದ ರಘುಪತಿ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು 7 ಮಂದಿ ಸದಸ್ಯರ ಸಮಿತಿಯ ಸಭೆಯನ್ನು ತಕ್ಷಣ ಕರೆದು ಮರಳುಗಾರಿಕೆಗೆ ಪರವಾನಿಗೆಯನ್ನು ಪಡೆದಿರುವವರಿಗೆ ತಕ್ಷಣ ಪರವಾನಿಗೆ ನೀಡಿ ತುರ್ತಾಗಿ ಮರಳುಗಾರಿಕೆಯನ್ನು ಆರಂಭಿಸುವಂತೆ ಅವರು ಜಿಲ್ಲಾಧಿಕಾರಿಯವರನ್ನು ಆಗ್ರಹಿಸಿದ್ದಾರೆ


Spread the love

Exit mobile version