Home Mangalorean News Kannada News ಉಡುಪಿ ಜಿಲ್ಲೆಯಲ್ಲಿ ಬುಧವಾರದಿಂದ ಸರಕಾರಿ ಮತ್ತು ಖಾಸಗಿ ಬಸ್ ಸಂಚಾರ ಆರಂಭ- ಜಿಲ್ಲಾಧಿಕಾರಿ ಜಗದೀಶ್

ಉಡುಪಿ ಜಿಲ್ಲೆಯಲ್ಲಿ ಬುಧವಾರದಿಂದ ಸರಕಾರಿ ಮತ್ತು ಖಾಸಗಿ ಬಸ್ ಸಂಚಾರ ಆರಂಭ- ಜಿಲ್ಲಾಧಿಕಾರಿ ಜಗದೀಶ್

Spread the love

ಉಡುಪಿ ಜಿಲ್ಲೆಯಲ್ಲಿ ಬುಧವಾರದಿಂದ ಸರಕಾರಿ ಮತ್ತು ಖಾಸಗಿ ಬಸ್ ಸಂಚಾರ ಆರಂಭ- ಜಿಲ್ಲಾಧಿಕಾರಿ ಜಗದೀಶ್

ಉಡುಪಿ: ಜನಸಾಮಾನ್ಯರ ಬೇಡಿಕೆಯಂತೆ ಉಡುಪಿ ಜಿಲ್ಲೆಯಲ್ಲಿ ಮೇ 13 ಬುಧವಾರದಿಂದ  ಬಸ್ ಸಂಚಾರ ಆರಂಭ ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.

ಅವರು ಈ ಕುರಿತು ವೀಡಿಯೋ ಸಂದೇಶದ ಮೂಲಕ ಜಿಲ್ಲೆಯ ಜನತೆಗೆ ಮಾಹಿತಿ ನೀಡಿದ್ದು, ಬುಧವಾರದಿಂದ ಕೆಲವು ಸರಕಾರಿ ಮತ್ತು ಖಾಸಗಿ ಬಸ್ಸುಗಳು ಓಡಾಟ ನಡೆಸಲಿವೆ.  ಬಸ್ಸಿನ ನಿರ್ವಾಹಕರು ಮತ್ತು ಚಾಲಕರು ಶೇ. 50ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಬಸ್ ನಲ್ಲಿ ಕೂರಿಸುವಂತಿಲ್ಲ. ನಿಗದಿಗಿಂತ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ದರೆ ಪ್ರಕರಣ ದಾಖಲಿಸಲಾಗುವುದು

ಬಸ್ ಪ್ರಯಾಣದ ವೇಳೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಪ್ರಯಾಣಿಕರ ಕರ್ತವ್ಯವಾಗಿದ್ದು, ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಅಲ್ಲದೆ ತಲೆ ಮೇಲೆ , ಕುತ್ತಿಗೆಗೆ ಮಾಸ್ಕ್ ನೇತಾಡಿಸಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಯಾಣಿಕರು ಮತ್ತು ಬಸ್ಸಿನ ಸಿಬಂದಿಗಳು ಕಡ್ಡಾಯವಾಗಿ ಸರ್ಕಾರದ ಎಲ್ಲಾ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯ ಪಾಲಿಸಬೇಕು ಎಂದು  ಅವರು ತಿಳಿಸಿದ್ದಾರೆ.


Spread the love

Exit mobile version