ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ಶಾಸಕ ರಘುಪತಿ ಭಟ್

Spread the love

ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ಶಾಸಕ ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ

 ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಭಟ್ ಅವರು ಜಿಲ್ಲೆಯಲ್ಲಿ  ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದು,  ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ.  ಜಿಲ್ಲೆಯ ಒಳಗಡೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಕಷ್ಟವಲ್ಲ ಆದರೆ ಹೊರ ಜಿಲ್ಲೆಯಿಂದ ಬರುತ್ತಿರುವ ಸೋಂಕಿತರೇ  ಬಹಳ ದೊಡ್ಡ ಸವಾಲಾಗಿದ್ದಾರೆ.

 ಜಿಲ್ಲೆಯ ಗಡಿ ಭಾಗಗಳನ್ನು ಸೀಲ್ ಡೌನ್  ಮಾಡಲು ಸಲಹೆ ನೀಡಿದ್ದೇನೆ ಅಲ್ಲದೆ ಹೊರ ಜಿಲ್ಲೆಯಿಂದ ಬರುತ್ತಿರುವವರನ್ನು ಹೋಮ್ ಕ್ವಾರಂಟೈನ್  ಮಾಡಬೇಕು   ಆಗ ಸೋಂಕು ಹರಡುವುದು ನಿಯಂತ್ರಣಕ್ಕೆ ಬರುತ್ತದೆ.  ನಾನು ನನ್ನ ಸಲಹೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದೇನೆ ಎಂದು  ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.


Spread the love