ಉಡುಪಿ ಜಿಲ್ಲೆ ಬಿಜೆಪಿ ಅಭರ್ಥಿ ಪಟ್ಟಿ ಫೈನಲ್; ಭಟ್, ಯಶ್ಪಾಲ್, ಸುನೀಲ್, ಹಾಲಾಡಿಗೆ ಟಿಕೇಟ್ ಕನ್ಫರ್ಮ್?

Spread the love

ಉಡುಪಿ ಜಿಲ್ಲೆ ಬಿಜೆಪಿ ಅಭರ್ಥಿ ಪಟ್ಟಿ ಫೈನಲ್; ಭಟ್, ಯಶ್ಪಾಲ್, ಸುನೀಲ್, ಹಾಲಾಡಿಗೆ ಟಿಕೇಟ್ ಕನ್ಫರ್ಮ್?

ಬೆಂಗಳೂರು: ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಿಗೆ ಶನಿವಾರ ಬಿಜೆಪಿ ಹೈಕಮಾಂಡ್ ಭಾಗಶಃ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ ಎನ್ನುವ ಮಾಹಿತ ತಿಳಿದು ಬಂದಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಕೇವಲ ಕಾರ್ಕಳ ಕ್ಷೇತ್ರವನ್ನು ಗೆಲ್ಲಲು ಯಶಸ್ವಿಯಾಗಿದ್ದು ಕುಂದಾಪುರ ಕ್ಷೇತ್ರದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಗೆದ್ದಿದ್ದು ಉಳಿದ ಕಾಪು, ಉಡುಪಿ ಮತ್ತು ಬೈಂದೂರಿನಲ್ಲಿ ಕಾಂಗ್ರೆಸ್ ಪಕ್ಷ ಗೆದ್ದುಕೊಂಡಿತ್ತು.

ಕಳೆದ ನಾಲ್ಕು ದಿನಗಳಿಂದ ಜಿಲ್ಲಾ ನಾಯಕರಿಂದ ಅಭಿಪ್ರಾಯ ಪಡೆದ ರಾಜ್ಯ ಬಿಜೆಪಿ ಚುನಾವಣಾ ಕೋರ್ ಕಮಿಟಿ ಸಭೆ ಉಡುಪಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಒರ್ವ ಅಭ್ಯರ್ಥಿಯನ್ನು ಫೈನಲ್ ಮಾಡಿದರೆ ಬೈಂದೂರು ಕ್ಷೇತ್ರಕ್ಕೆ ಮಾತ್ರ ಇಬ್ಬರ ಹೆಸರನ್ನು ಫೈನಲ್ ಮಾಡಿದ್ದು, ರಾಜ್ಯದ ಸುಮಾರು 140 ಕ್ಷೇತ್ರಗಳ ಅಭ್ಯರ್ಥಿಗಳ ಫೈನಲ್ ಪಟ್ಟಿಯೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡ್ಯೂರಪ್ಪ ಅವರು ದೆಹಲಿಗೆ ತೆರಳಿದ್ದಾರೆ, ದೆಹಲಿಯಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಬಿಜೆಪಿ ರಾಷ್ಟ್ರೀಯ ಚುನಾವಣಾ ಸಮಿತಿಯಲ್ಲಿ ಒಪ್ಪಿಗೆ ಪಡೆದುಕೊಂಡು ಭಾನುವಾರ ಸಂಜೆಯ ಹೊತ್ತಿಗೆ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಂಭವವಿದೆ ಎನ್ನಲಾಗಿದೆ.

ಬಲ್ಲ ಮಾಹಿತಿಗಳ ಪ್ರಕಾರ ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಿಗೆ ಫೈನಲ್ ಮಾಡಿದ ಅಭ್ಯರ್ಥಿಗಳ ಪಟ್ಟಿ ಇಂತಿದೆ. ಉಡುಪಿ – ರಘುಪತಿ ಭಟ್, ಕಾಪು –ಯಶಪಾಲ ಸುವರ್ಣ, ಕುಂದಾಪುರ – ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾರ್ಕಳ – ಸುನಿಲ್ ಕುಮಾರ್ ಆದರೆ ಬೈಂದೂರಿಗೆ ಜಯಪ್ರಕಾಶ್ ಹೆಗ್ಡೆ ಮತ್ತು ಸುಕುಮಾರ್ ಶೆಟ್ಟಿ ಹೆಸರನ್ನು ಫೈನಲ್ ಮಾಡಲಾಗಿದೆ ಎನ್ನಲಾಗಿದೆ.ಪಟ್ಟಿಯಲ್ಲಿರುವ ಹೆಸರುಗಳೇ ಕೇಂದ್ರಿಯ ಬಿಜೆಪಿ ಚುನಾವಣಾ ಸಮಿತಿಯಲ್ಲಿ ಫೈನಲ್ ಆಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಆದರೆ ಪಕ್ಷದ ಅಧಿಕೃತ ಪಟ್ಟಿ ಬರುವ ತನಕ ಎಲ್ಲಾ ಟಿಕೇಟ್ ಆಕಾಂಕ್ಷಿಗಳು ಕಾಯಬೇಕಷ್ಟೆ.


Spread the love