Home Mangalorean News Kannada News ಉಡುಪಿ: ಮುಖ್ಯಮಂತ್ರಿಗಳೊಂದಿಗೆ ಜಿಲ್ಲೆಯ ಫಲಾನುಭವಿಗಳ ಸಂವಾದ

ಉಡುಪಿ: ಮುಖ್ಯಮಂತ್ರಿಗಳೊಂದಿಗೆ ಜಿಲ್ಲೆಯ ಫಲಾನುಭವಿಗಳ ಸಂವಾದ

Spread the love

ಉಡುಪಿ:- ಸರಕಾರದ ವಿವಿಧ ಭಾಗ್ಯ ಯೋಜನೆಗಳ ಫಲಾನುಭವಿಗಳೊಂದಿಗೆ ರಾಜ್ಯದ ಮುಖ್ಯಮಂತ್ರಿಗಳು ಜೂನ್ 27 ರಂದು ಮೈಸೂರಿನಲ್ಲಿ ಮೈಸೂರು ವಿಶ್ವವಿದ್ಯಾಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 6 ಮಂದಿ ಫಲಾನುಭವಿಗಳು ಪಾಲ್ಗೊಂಡಿದ್ದರು.

1

ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಕ್ಷೀರಭಾಗ್ಯ ಯೋಜನೆಯ ಫಲಾನುಭವಿ ಸರಕಾರಿ ಹೆಣ್ಣುಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿನಿ ಆದಿತಿ ಮುಖ್ಯಮಂತ್ರಿಗಳೊಂದಿಗೆ ನೇರ ಸಂವಾದದಲ್ಲಿ ಮಾತನಾಡಿ, ಕ್ಷೀರಭಾಗ್ಯದ ಅನುಕೂಲದ ಬಗ್ಗೆ ಮುಖ್ಯಮಂತ್ರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಶಾಲಾ ಮಕ್ಕಳಿಗೆ ವಾರದ 6 ದಿನ ಹಾಲು ನೀಡಬೇಕೆಂದು ಬೇಡಿಕೆ ಇಟ್ಟರು.
ಜಿಲ್ಲೆಯಿಂದ ವಿದ್ಯಾಸಿರಿ ಯೋಜನೆ ಫಲಾನುಭವಿ ಸುನೀಲ್ ಮತ್ತು ರಾಘವೇಂದ್ರ ಯು, ಬಸವ ವಸತಿ ಯೋಜನೆ ಫಲಾನುಭವಿ ವಾರಿಜಾ, ಇಂದಿರಾ ಆವಾಸ್ ಯೋಜನೆಯ ಜ್ಯೋತಿ, ಅನ್ನಭಾಗ್ಯ ಯೋಜನೆಯ ಮೊಹಮದ್ ರಫೀಕ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Spread the love

Exit mobile version