Home Mangalorean News Kannada News ಉಡುಪಿ: ಮೇ 19 ರಂದು ಜಿಲ್ಲೆಗೆ ರಾಜ್ಯ ಅನುಸೂಚಿತ ಜಾತಿ, ಬುಡಕಟ್ಟು ಆಯೋಗದ ಅಧ್ಯಕ್ಷರ ಪ್ರವಾಸ

ಉಡುಪಿ: ಮೇ 19 ರಂದು ಜಿಲ್ಲೆಗೆ ರಾಜ್ಯ ಅನುಸೂಚಿತ ಜಾತಿ, ಬುಡಕಟ್ಟು ಆಯೋಗದ ಅಧ್ಯಕ್ಷರ ಪ್ರವಾಸ

Spread the love

ಉಡುಪಿ: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು ಮೇ 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ಸಂಘ ಸಂಸ್ಥೆಗಳ ಪಧಾದಿಕಾರಿಗಳೊಂದಿಗೆ ಕುಂದು ಕೊರತೆ ಬಗ್ಗೆ ಸಭೆ ನಡೆಸುವರು. ಮಧ್ಯಾಹ್ನ 2.30 ಕ್ಕೆ ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಅಭಿವೃದ್ಧಿ ಇಲಾಖಾ ಅಧಿಕಾರಿಗಳೊಂದಿಗೆ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು.


Spread the love

Exit mobile version