Home Mangalorean News Kannada News ಉಡುಪಿ: ಮೇ 4 ರಂದು ಜಿಲ್ಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ

ಉಡುಪಿ: ಮೇ 4 ರಂದು ಜಿಲ್ಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ

Spread the love

ಉಡುಪಿ: ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ರವರು ಮೇ 4ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮೇ 4 ರಂದು ಬೆಳಿಗ್ಗೆ 11.30 ಕ್ಕೆ ಕುಂದಾಪುರ ತಾಲೂಕು ಹೊಸಂಗಡಿ ಹೆಲಿಪ್ಯಾಡಿಗೆ ಆಗಮಿಸುವರು. 11.50 ಕ್ಕೆ ಸರ್ಕಾರಿ ಪ್ರೌಢಶಾಲೆ ಮೈದಾನ, ಸಿದ್ದಾಪುರ ರಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಿರುವ ವರಾಹಿ ನೀರಾವರಿ ಯೋಜನೆಯ ಪೂರ್ಣಗೊಂಡಿರುವ ಕಾಮಗಾರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.10 ಗಂಟೆಗೆ ಬೆಳಪು ಗ್ರಾಮದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ಅತ್ಯಾಧುನಿಕ ಸಂಶೋಧನಾ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸವರು. ನಂತರ 3.30 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.


Spread the love

Exit mobile version