Home Mangalorean News Kannada News ಉಡುಪಿ: ರಂಗವೇದಿಕೆಯಲ್ಲಿ ಕುಸಿದು ಮೃತಪಟ್ಟ ಯಕ್ಷಗಾನ ಕಲಾವಿದ

ಉಡುಪಿ: ರಂಗವೇದಿಕೆಯಲ್ಲಿ ಕುಸಿದು ಮೃತಪಟ್ಟ ಯಕ್ಷಗಾನ ಕಲಾವಿದ

Spread the love

ಉಡುಪಿ: ರಂಗವೇದಿಕೆಯಲ್ಲಿ ಕುಸಿದು ಮೃತಪಟ್ಟ ಯಕ್ಷಗಾನ ಕಲಾವಿದ

ಉಡುಪಿ: ಯಕ್ಷಗಾನ ಕಲಾವಿದರೊಬ್ಬರು ವೇದಿಕೆಯಲ್ಲೇ ಕುಸಿದು ಮೃತಪಟ್ಟ ಘಟನೆ ಬೈಂದೂರಿನ ಜೋಗಿಬೆಟ್ಟು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.

ಹುಡಗೋಡು ಚಂದ್ರಹಾಸ(52) ಮೃತಪಟ್ಟ ಕಲಾವಿದರಾಗಿದ್ದಾರೆ. ಇವರು ಉತ್ತರ ಕನ್ನಡ ಮೂಲದ ಬಡಗುತಿಟ್ಟು ಯಕ್ಷಗಾನದ ಹೆಸರಾಂತ ಕಲಾವಿದರಾಗಿದ್ದರು.

ಜೋಗಿಬೆಟ್ಟುವಿನಲ್ಲಿ ಇವರು ಜಲವಳ್ಳಿ ಮೇಳದ ವತಿಯಿಂದ ನಡೆಯುತ್ತಿದ್ದ ಯಕ್ಷಗಾನದಲ್ಲಿ ಸಾಲ್ವನ ಪಾತ್ರ ನಿರ್ವಹಿಸುತ್ತಿದ್ದರು. ಸಂಭಾಷಣೆ ಮುಗಿಸಿ ಕುಣಿತ ಆರಂಭಿಸುತ್ತಿದ್ದಂತೆ ಚಂದ್ರಹಾಸ ಕುಸಿದು ಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲೇ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು.


Spread the love

Exit mobile version