ಉಪ್ಪಿನಂಗಡಿಯಲ್ಲಿ ಜ್ಯುವೆಲ್ಲರಿ ದರೋಡೆ; 30 ಲಕ್ಷ ರೂ. ಮೌಲ್ಯದ ಒಡವೆ ಕಳವು

Spread the love

ಉಪ್ಪಿನಂಗಡಿಯಲ್ಲಿ ಜ್ಯುವೆಲ್ಲರಿ ದರೋಡೆ; 30 ಲಕ್ಷ ರೂ. ಮೌಲ್ಯದ ಒಡವೆ ಕಳವು

ಉಪ್ಪಿನಂಗಡಿ: ಇಲ್ಲಿನ ಶಾಲಾ ರಸ್ತೆಯಲ್ಲಿರುವ ಆರ್‌. ಕೆ ಜ್ಯುವೆಲ್ಲರಿಗೆ ಬುಧವಾರ ತಡರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆಗಳನ್ನು ದೋಚಿದ ಘಟನೆ ಬೆಳಕಿಗೆ ಬಂದಿದೆ.

ಜ್ಯುವೆಲ್ಲರಿಯಿಂದ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನ ದೋಚಲಾಗಿದೆ ಎಂದು ತಿಳಿದುಬಂದಿದೆ. ದರೋಡೆಕೋರರು ಗ್ಯಾಸ್‌ ಕಟ್ಟರ್‌ ಬಳಸಿ, ಅಂಗಡಿಯ ಶಟರ್‌ ಬಾಗಿಲು ಮುರಿದು ಒಳನುಗ್ಗಿದ್ದಾರೆ ಆದರೆ ಒಳಗಿದ್ದ ಲಾಕರ್ ರೂಮ್‌ ದೋಚಿಲ್ಲ.

ಈ ಜ್ಯುವೆಲ್ಲರಿಗೆ ಒಬ್ಬ ಕಾವಲುಗಾರನಿದ್ದು, ಉಪ್ಪಿನಂಗಡಿ ಪೇಟೆಗೂ ಆತನೆ ಕಾವಲುಗಾರನಾಗಿದ್ದಾನೆ. ಆತ ರಾತ್ರಿ 1 ರಿಂದ 3 ಗಂಟೆಯವರೆಗೆ ಪೇಟೆಯ ರೌಂಡ್ಸ್‌ ಗೆ ಹೋಗುತ್ತಾನೆ. ಆ ವೇಳೆಯಲ್ಲಿ ದರೋಡೆಕೋರರು ಈ ಕೃತ್ಯವೆಸಗಿದ್ದಾರೆ. ಮೂರು ಗಂಟೆಯ ನಂತರ ಆತ ಮರಳಿ ಬಂದಾಗ ದರೋಡೆಯ ವಿಚಾರ ತಿಳಿದಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾನೆ.

ಸ್ಥಳಕ್ಕೆ ಡಿಎಸ್‌ ಪಿ ಭಾಸ್ಕರ್‌ ಶೆಟ್ಟಿ, ಶ್ವಾನ ದಳ, ಮತ್ತು ಉಪ್ಪಿನಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.


Spread the love