ಉಮೇಶ್ ನಾಯ್ಕ್ ಚೇರ್ಕಾಡಿ    ಪಕ್ಷದ ಎಲ್ಲಾ ಲಾಭ ಪಡೆದು ಬೆನ್ನಿಗೆ ಚೂರಿ ಹಾಕಿದ್ದಾರೆ – ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸ್ಪಷ್ಟನೆ

Spread the love

ಉಮೇಶ್ ನಾಯ್ಕ್ ಚೇರ್ಕಾಡಿ    ಪಕ್ಷದ ಎಲ್ಲಾ ಲಾಭ ಪಡೆದು ಬೆನ್ನಿಗೆ ಚೂರಿ ಹಾಕಿದ್ದಾರೆ – ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸ್ಪಷ್ಟನೆ

ಬ್ರಹ್ಮಾವರ: ಮಾಜಿ ತಾಪಂ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ  ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ರೀತಿಯ ಹುದ್ದೆಗಳನ್ನು ಪಡೆದು ಈಗ ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿ ಸೇರಿದ್ದಾರೆ ಎಂದು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸ್ಪಷ್ಟೀಕರಣ ನೀಡಿದೆ

ಮಾಜಿ ತಾಪಂ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಕಾಂಗ್ರೆಸ್ ಪಕ್ಷದ ಹೆಚ್ಚಿನ ಲಾಭ ಪಡೆದು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತನಾಗಿ ಹಾಗೂ  ಪ್ರಮಾಣಿಕನಾಗಿ ಇರಲು ಅಸಮರ್ಥರಾಗಿ, ಕಾಂಗ್ರೆಸ್ ಪಕ್ಷದ ಬೆನ್ನಿಗೆ ಚೂರಿ ಹಾಕಿವುದರ ಮೂಲಕ ಬಿಜೆಪಿ ಪಕ್ಷಕ್ಕೆ ಸೇರಿರುತ್ತಾರೆ. ಉಮೇಶ್ ನಾಯ್ಕ್ ರವರ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಿಲ್ಲ ಆದರೆ ಮುಂದಿನ ದಿನಗಳಲ್ಲಿ ಮೋಸವನ್ನೇ ಮೈಗೂಡಿಸಿಕೊಂಡ ಉಮೇಶ್ ನಾಯ್ಕ್ ಬಿಜೆಪಿ ಪಕ್ಷಕ್ಕೆ ಕೂಡ ಇವರು ಮೋಸ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ..


Spread the love