ಉಳ್ಳಾಲದಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಯುವಕನ ಸಾವು

Spread the love

ಉಳ್ಳಾಲದಲ್ಲಿ ವಿದ್ಯುತ್ ಆಘಾತಕ್ಕೊಳಗಾಗಿ ಯುವಕನ ಸಾವು

ಮಂಗಳೂರು: ತುಂಡಾಗಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ನಡೆದಿದೆ.

ಮೃತರನ್ನು ಉಳಿಯ ನಿವಾಸಿ ಅಶೋಕ್ ಡಿಸೋಜಾ (28) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಉಳಿಯ ಧರ್ಮರಸರ ಕ್ಷೇತ್ರದ ಬಳಿ ಈ ಅವಘಟ ಸಂಭವಿಸಿದ್ದು, ಗಾಳಿ ಮಳೆಯಿಂದ ಹೈಟೆನ್ಶನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಆದರೆ ಈ ಸಂದರ್ಭ ವಿದ್ಯುತ್ ಸಂಪರ್ಕ ಕಡಿತಗೊಂಡಿರಲಿಲ್ಲ. ಇದರ ಅರಿವಿಲ್ಲದ ಅಶೋಕ್ ಡಿಸೋಜಾ ಅವರು ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯನ್ನು ಸ್ಪರ್ಶಿಸಿದ್ದರಿಂದ ವಿದ್ಯುತ್ ಅಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


Spread the love