Home Mangalorean News Kannada News ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ

ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ

Spread the love

ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ

ಉಳ್ಳಾಲ: ಯುವಕನೋರ್ವ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಹಾರಿ ನಾಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ನದಿಗೆ ಹಾರಿದರೆನ್ನಲಾದವರನ್ನು ಉಳ್ಳಾಲಬೈಲ್ ನಿವಾಸಿ ನವೇಶ್(30) ಎಂದು ಗುರುತಿಸಲಾಗಿದೆ.

ತೊಕ್ಕೊಟ್ಟಿನಲ್ಲಿ ಅಂಗಡಿ ಹೊಂದಿರುವ ಇವರು ಇಂದು ಮುಂಜಾನೆ 6:30ರ ಸುಮಾರಿಗೆ ನದಿಗೆ ಹಾರಿದ್ದರೆನ್ನಲಾಗಿದೆ.

ಇವರ ಬೈಕ್ ಸೇತುವೆಯ ಮೇಲೆ ನಿಲ್ಲಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಪೊಲೀಸರು ನವೇಶ್‌ಗಾಗಿ ಶೋಧ ಮುಂದುವರಿಸಿದ್ದಾರೆ.


Spread the love

Exit mobile version