ಎಐಸಿಸಿ ಸದಸ್ಯರಾಗಿ ಅಮೃತ್ ಶೆಣೈ ಮತ್ತು ರಾಕೇಶ್ ಮಲ್ಲಿ ನೇಮಕ

Spread the love

ಎಐಸಿಸಿ ಸದಸ್ಯರಾಗಿ ಅಮೃತ್ ಶೆಣೈ ಮತ್ತು ರಾಕೇಶ್ ಮಲ್ಲಿ ನೇಮಕ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಯುವ ನಾಯಕ ಅಮೃತ್ ಶೆಣೈ ಮತ್ತು ರಾಜ್ಯ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿ ಅವರು ನೂತನವಾಗಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಇದರ ಸದಸ್ಯರಾಗಿ ಉಡುಪಿ ಜಿಲ್ಲೆಯಿಂದ ನೇಮಕಗೊಂಡಿದ್ದಾರೆ.

ಅಮೃತ್ ಶೆಣೈ ಅವರು ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಸೇವೆ ನೀಡಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ, ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಇನ್ನೋರ್ವ ಸದಸ್ಯ ರಾಕೇಶ್ ಮಲ್ಲಿ ಅವರು ಕಾಂಗ್ರೆಸ್ ಕಾರ್ಮಿಕ ಘಟಕವಾದ ಇಂಟಕ್ ಇದರ ರಾಜ್ಯಾಧ್ಯಕ್ಷರಾಗಿದ್ದು, ಪ್ರಸ್ತುತ ಕುಂದಾಪುರ ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿ ಕೂಡ ಆಗಿದ್ದಾರೆ.

ಇವರೊಂದಿಗೆ ಮಂಗಳೂರಿನ ಮಾಜಿ ಮೇಯರ್ ಕವಿತಾ ಸನೀಲ್ ಮತ್ತು ಕೆಪಿಸಿಸಿ ಕಾರ್ಯದರ್ಶಿ ವಹಿದಾ ಇಸ್ಮಾಯಿಲ್ ಕೂಡ ಎಐಸಿಸಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸಿನಿಂದ ಒಟ್ಟು 99 ಮಂದಿ ಆಯ್ಕೆಯಾಗಿದ್ದು, ಕರಾವಳಿಯ ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ಕೂಡ ಸಮಿತಿಯಲ್ಲಿದ್ದಾರೆ.


Spread the love