ಎರಿಕ್ ಒಝೇರಿಯೊಗೆ ಕೊಂಕಣಿ ಅಕಾಡೆಮಿಯಿಂದ ನುಡಿ ನಮನ
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು, ಇತ್ತೀಚೆಗೆ ದಿವಂಗತರಾದ ಅಕಾಡೆಮಿಯ ಮಾಜಿ ಅಧ್ಯಕ್ಷ ಎರಿಕ್ ಒಝೇರಿಯೊ ಅವರಿಗೆ ನುಡಿನಮನ ಸಲ್ಲಿಸಲು ‘ಉತ್ರಾಂಜಲಿ ಕಾರ್ಯಕ್ರಮವನ್ನು, ಬೆಂದೂರು ಸಂತ ಸೆಬೆಸ್ಟಿಯನ್ ಮಿನಿ ಹಾಲಿನಲ್ಲಿ ಆಯೋಜಿಸಿತ್ತು.
ಪ್ರಸ್ತಾವನೆಗೈದು ಸ್ವಾಗತ ಕೋರಿದ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ತನ್ನ ಮತ್ತು ಎರಿಕ್ ರವರ 37 ವರ್ಷಗಳ ಒಡನಾಟವನ್ನು ಮೆಲುಕು ಹಾಕಿದರು.
ಎರಿಕ್ರವರ ಪತ್ನಿ ಜೊಯ್ಸ್ರವರು, ಒಝೇರಿಯೊ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಗಳು ಡಾ ರಶ್ಮಿ, ಅಳಿಯ ಸಂಗೀತಗಾರ ಆಲ್ವಿನ್ ಫೆರ್ನಾಂಡಿಸ್, ಮೊಮ್ಮಕ್ಕಳಾದ ಅಮನ್, ಜಿಯಾ ಹಾಗೂ ಅಕಾಡಮಿ ಅಧ್ಯಕ್ಷರು, ಸದಸ್ಯರಾದ ನವೀನ್ ಲೋಬೊ, ರೊನಾಲ್ಡ್ ಕ್ರಾಸ್ತಾ, ಅಕ್ಷತಾ ನಾಯಕ್, ಮಾಂಡ್ ಸೊಭಾಣ್ ಅಧ್ಯಕ್ಷ ಲುವಿ ಪಿಂಟೊ, ಮಂಗಳೂರು ಧರ್ಮಪ್ರಾಂತ್ಯದ ಪಿಆರ್ಒ ರೊಯ್ ಕ್ಯಾಸ್ತೆಲಿನೊ, ಕೊಂಕಣಿ ಲೇಖಕರ ಒಕ್ಕೂಟದ ಮುಖ್ಯಸ್ಥ ರಿಚ್ಚಾರ್ಡ್ ಮೊರಾಸ್, ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ, ಪ್ರಮುಖ ಭಾಷಣಕಾರರು, ಲೇಖಕರು, ಸಂಘಟಕರು ಮತ್ತು ಅಭಿಮಾನಿಗಳು ಪುಷ್ಪಾರ್ಚನೆ ಮಾಡಿದರು.
ಎರಿಕ್ ಒಝೇರಿಯೊರವರ ಕಾರ್ಯಕ್ಷೇತ್ರದ ವಿವಿಧ ಮಜಲುಗಳಾದ – ವ್ಯಕ್ತಿ ಮತ್ತು ಶಕ್ತಿ (ವಾಲ್ಟರ್ ನಂದಳಿಕೆ), ಕೊಂಕಣಿ ಅಕಾಡೆಮಿ ಮತ್ತು ಶಿಕ್ಷಣ ಕ್ಷೇತ್ರ (ಸ್ಟೀವನ್ ಕ್ವಾಡ್ರಸ್), ಸಂಗೀತ ಮತ್ತು ಸಂಸ್ಕೃತಿ ಕ್ಷೇತ್ರ (ಚರಣ್ ಮಲ್ಯ) ಹಾಗೂ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ಪ್ರೇರಣಾಶಕ್ತಿ (ಕನ್ಸೆಪ್ಟಾ ಫೆರ್ನಾಂಡಿಸ್) ಇವರುಗಳು ತಮ್ಮ ಒಡನಾಟಗಳನ್ನು ಆತ್ಮೀಯವಾಗಿ ಅನಾವರಣಗೊಳಿಸಿ ಮಾತನಾಡಿದರು. ಎರಿಕ್ರವರ ಅಭಿಮಾನಿ ನಾರಾವಿಯಗೋಪಾಲಕೃಷ್ಣ ಇವರು ಸ್ಥಳದಲ್ಲೇ ರಚಿಸಿದ ಕವಿತೆಗೆ ಗಾಯಕ ರೊನಿ ಕ್ರಾಸ್ತಾ ಸ್ವರ ಸಂಯೋಜಿಸಿ ಹಾಡಿದರು.
ಅಕಾಡೆಮಿ ಸದಸ್ಯ ಸಮರ್ಥ್ ಭಟ್ ಧನ್ಯವಾದವನ್ನಿತ್ತರು. ರೊನಿ ಅರುಣ್ ಕಾರ್ಯಕ್ರಮ ನಿರೂಪಿಸಿದರು.