ಎ.1ರಿಂದ ಸೆಂಟ್ರಲ್ ಮಾರ್ಕೆಟ್ ನ ಬಳಕೆ ಹೋಲ್ ಸೇಲ್ ವ್ಯಾಪಾರಿಗಳಿಗೆ ಮಾತ್ರ ; ಆಯುಕ್ತ ಅಜಿತ್ ಕುಮಾರ್ ಹೆಗ್ಡೆ

Spread the love

ಎ.1ರಿಂದ ಸೆಂಟ್ರಲ್ ಮಾರ್ಕೆಟ್ ನ ಬಳಕೆ ಹೋಲ್ ಸೇಲ್ ವ್ಯಾಪಾರಿಗಳಿಗೆ ಮಾತ್ರ ; ಆಯುಕ್ತ ಅಜಿತ್ ಕುಮಾರ್ ಹೆಗ್ಡೆ

ಮಂಗಳೂರು: ಎ.1ರಿಂದ ಸೆಂಟ್ರಲ್ ಮಾರ್ಕೆಟ್ನ ಬಳಕೆ ಹೋಲ್ಸೇಲ್ ವ್ಯಾಪಾರಿಗಳಿಗೆ ಮಾತ್ರ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ಸೆಂಟ್ರಲ್ ಮಾರ್ಕೆಟ್ನ್ನು ಹೋಲ್ಸೇಲ್ ವ್ಯಾಪಾರಸ್ಥರು ಮಾತ್ರ ಬಳಸುವುದರೊಂದಿಗೆ ರಾತ್ರಿ 11ರಿಂದ ಮುಂಜಾನೆ 4 ಗಂಟೆಯ ಒಳಗೆ ತಮ್ಮ ವ್ಯವಹಾರವನ್ನು ಮುಗಿಸಬೇಕು. ರಾತ್ರಿ ವೇಳೆ ಚಿಲ್ಲರೆ ವ್ಯಾಪಾರಿಗಳು ಹೋಲ್ಸೇಲ್ ವ್ಯಾಪಾರಿಗಳ ಬಳಿ ಖರೀದಿ ಮಾಡಬೇಕು ಆದರೆ ಸೆಂಟ್ರಲ್ ಮಾರ್ಕೆಟ್ನಲ್ಲಿರುವ ಚಿಲ್ಲರೆ ವ್ಯಾಪಾರಿಗಳಿಗೆ ಅನುಮತಿ ಇಲ್ಲ ಎಂದಿರುವ ಅವರು ಮಾರ್ಕೆಟ್ ವ್ಯಾಪಾರಿಗಳಿಗೆ ಜಿಲ್ಲಾಡಳಿತದಿಂದ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಸೆಂಟ್ರಲ್ ಮಾರ್ಕೆಟ್ನ ಒಳಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ ಗ್ರಾಹಕರು ನಗರದ ವಿವಿದೆಡೆ ಇರುವ ದಿನಸಿ ಅಂಗಡಿಗಳಿಂದ ವಸ್ತುಗಳನ್ನು ಖರೀದಿಸಬೇಕು ಅಲ್ಲದೆ ಎಪ್ರಿಲ್ 1ರಿಂದ ಸುರತ್ಕಲ್ನ ಮಾರುಕಟ್ಟೆ ಕೂಡ ಸಂಪೂರ್ಣ ಸ್ಥಗಿತಗೊಳಿಸಲಿದ್ದು ಸುರತ್ಕಲ್ ಮಾರ್ಕೆಟ್ನ ವ್ಯಾಪಾರಿಗಳಿಗೂ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ಸುರತ್ಕಲ್ ಮಾರ್ಕೆಟ್ ವ್ಯಾಪಾರಿಗಳಿಗೆ ಬೆಳಗ್ಗೆ 7ರಿಂದ 12ರವರೆಗೆ ಪರ್ಯಾಯ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ಕಾರಣಕ್ಕೆ ಭಯಪಡಬೇಕಾದ ಅವಶ್ಯಕತೆಯಿಲ್ಲ ಪ್ರತೀದಿನ ದಿನಸಿ, ತರಕಾರಿ ಅಂಗಡಿಗಳು ಬೆಳಗ್ಗೆ 7ರಿಂದ 12 ರವರೆಗೆ ತೆರೆದಿರುತ್ತವೆ. 12 ಗಂಟೆಯ ಬಳಿಕ ಎಲ್ಲಾ ಅಂಗಡಿ,ಮಳಿಗೆಗಳು ಬಂದ್ ಮಾಡಬೇಕು. ಖರೀದಿ ವೇಳೆ ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸಹಕಾರ ನೀಡಬೇಕು ಎಂದು ಮಂಗಳೂರು ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಮನವಿ ಮಾಡಿಕೊಂಡಿದ್ದಾರೆ.


Spread the love