ಏ. 12 ರಿಂದ ಸಾಂಪ್ರದಾಯಿಕ ಹಾಗೂ ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ : ಕೋಟ ಶ್ರೀನಿವಾಸ ಪೂಜಾರಿ

Spread the love

ಏ. 12 ರಿಂದ ಸಾಂಪ್ರದಾಯಿಕ ಹಾಗೂ ನಾಡ ದೋಣಿಗಳಿಗೆ ಮೀನುಗಾರಿಕೆಗೆ ಅವಕಾಶ : ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಕೇಂದ್ರ ಸರ್ಕಾರದ ಸೂಚನೆ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಕರಾವಳಿಯ ಎಲ್ಲಾ ಸಾಂಪ್ರದಾಯಿಕ ಮತ್ತು ನಾಡದೋಣಿ ಮೀನುಗಾರಿಕೆಗೆ ಎಪ್ರಿಲ್ 12ನೇ ತಾರೀಖಿನಿಂದ ಜಾರಿಗೆ ಬರುವಂತೆ ಅವಕಾಶ ಕಲ್ಪಿಸಲಾಗಿದೆ ಎಂದು ಬಂದರು ಮತ್ತು ಮೀನುಗಾರಿಕೆ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸುಮಾರು 14 ಸಾವಿರ ನಾಡದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳಿದ್ದು, ಅವುಗಳೆಲ್ಲ ಮೀನುಗಾರಿಕೆಗೆ ತೊಡಗಿಸಿಕೊಳ್ಳಲಿದೆ. ಕರೋನ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಮೀನು ಮಾರಾಟ ಮಾಡಬೇಕೆಂದು ವಿನಂತಿ ಎಂದು ಕೋಟ ಶ್ರೀನಿವಾಸ ಪೂಜಾರಿಯವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Spread the love