ಐ.ಎಂ.ಎ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಐ.ಎ.ಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

Spread the love

ಐ.ಎಂ.ಎ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಐ.ಎ.ಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ

ಬೆಂಗಳೂರು: ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಐಎಂಎ ಹಗರಣದ ಪ್ರಕರಣದಲ್ಲಿ ವಿಜಯ್ ಶಂಕರ್ ಅಮಾನತುಗೊಂಡು, ಎಸ್ಐಟಿಯಿಂದ ಬಂಧನಕ್ಕೊಳಗಾಗಿದ್ದರು. ಜಯನಗರ ನಿವಾಸದಲ್ಲಿ ವಿಜಯ್ ಶಂಕರ್ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಜಿಲ್ಲಾಧಿಕಾರಿಯಾಗಿದ್ದ ವಿಜಯ್ ಶಂಕರ್ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿತ್ತು.

ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಹೇಳಿಕೆ ಆಧಾರದ ಮೇಲೆ 2019 ಜುಲೈ 8ರಂದು ಲಂಚ ಪಡೆದ ಆರೋಪದಲ್ಲಿ ವಿಜಯ್ ಶಂಕರ್ ಅವರನ್ನ ಎಸ್‍ಐಟಿ ಬಂಧಿಸಿತ್ತು. ಜಾಮೀನು ಪಡೆದು ವಿಜಯ್ ಶಂಕರ್ ಹೊರಬಂದಿದ್ದರು.


Spread the love