Home Mangalorean News Kannada News ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ.

ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ.

Spread the love

ಕರಾವಳಿ ಉತ್ಸವವು ಈ ವರ್ಷ ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯಲಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಕರಾವಳಿ ಉತ್ಸವ ವಿವಿಧ ಉಪಸಮಿತಿಗಳ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಕರಾವಳಿಯ ಸಾಮಾನ್ಯ ಸಂಸ್ಕøತಿಗಳು ಈ ಉತ್ಸವದಲ್ಲಿ ಪ್ರತಿಬಿಂಬವಾಗಬೇಕು. ಇಲ್ಲಿನ ಜನತೆಯ ಉತ್ಸವವಾಗಿ ಮಾರ್ಪಾಡಬೇಕು. ಸ್ಥಳೀಯರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

ಕರಾವಳಿ ಉತ್ಸವ ಡಿ.22ರಿಂದ ಆರಂಭವಾಗಲಿದ್ದು, ಅಂದು ನೆಹರು ಮೈದಾನದಿಂದ ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದವರೆಗೆ ವಿವಿಧ ಕಲೆ, ಸಂಸ್ಕøತಿ ಹಾಗೂ ಜನಪದ ವೈಭವಗಳನ್ನು ಬಿಂಬಿಸುವ ಆಕರ್ಷಕ ಸಾಂಸ್ಕøತಿಕ ಮೆರವಣಿಗೆ ಸಂಚರಿಸಲಿದೆ. ಬಳಿಕ ಕರಾವಳಿ ಉತ್ಸವ ಉದ್ಘಾಟನೆಯಾಗಲಿದೆ. ಈ ವರ್ಷ ಲಾಲ್‍ಬಾಗ್ ಹಾಗೂ ಕದ್ರಿ ಪಾರ್ಕ್ ಎರಡೂ ಕಡೆ ಎಲ್ಲಾ 10 ದಿನಗಳಲ್ಲೂ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಮತ್ತು ಕಲಾ ಪ್ರಕಾರಗಳಿಗೆ ಆದ್ಯತೆ ನೀಡಲಾಗಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರ ಕಾರ್ಯಕ್ರಮಗಳು ನಡೆಯಲಿವೆ. ನಾಗರೀಕರ ಅಭಿರುಚಿಗೆ ತಕ್ಕಂತೆ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಡಾ. ಸಸಿಕುಮಾರ್ ಸೆಂಥಿಲ್ ತಿಳಿಸಿದರು.

ಕೊನೆಯ ಮೂರು ದಿನಗಳಲ್ಲಿ ಪಣಂಬೂರು ಬೀಚ್‍ನಲ್ಲಿ ಬೀಚ್ ಉತ್ಸವ ಏರ್ಪಡಿಸಲಾಗಿದೆ. ಇಲ್ಲಿ ಆಕರ್ಷಕ ಕಲಾ ಕಾರ್ಯಕ್ರಮಗಳು ನಡೆಯಲಿವೆ. ಕರಾವಳಿ ಉತ್ಸವ ಸಮಾರೋಪ ಡಿಸೆಂಬರ್ 31ರಂದು ಪಣಂಬೂರು ಬೀಚ್‍ನಲ್ಲಿಯೇ ನಡೆಯಲಿದೆ. ಕರಾವಳಿ ಉತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಉಪಸಮಿತಿಗಳು ಯೋಜನೆ ಹಾಕಿಕೊಳ್ಳು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಅಪರ ಜಿಲ್ಲಾಧಿಕಾರಿ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಮುಹಮ್ಮದ್ ನಝೀರ್, ವಿವಿಧ ಇಲಾಖಾಧಿಕಾರಿಗಳು, ಉಪಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮರಳು: ಲಾರಿ- ಬೋಟ್‍ಗಳಿಗೆ ಜಿಪಿಎಸ್ ಕಡ್ಡಾಯ

ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಲಾರಿ ಹಾಗೂ ಬೋಟುಗಳಿಗೆ ಜಿಪಿಎಸ್ ಮೆಷಿನ್ ಅಳವಡಿಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ತಿಳಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮರಳುಗಾರಿಕೆಯಲ್ಲಿ ಬಳಸಲಾಗುವ ಎಲ್ಲಾ ವಿಧದ ಬೋಟುಗಳಿಗೆ ಆಯಾ ನದಿಗೆ ಸಂಬಂಧಪಟ್ಟಂತೆ ನಿರ್ದಿಷ್ಟ ಬಣ್ಣ ಅಳವಡಿಸಬೇಕಾಗುತ್ತದೆ. ಅದೇ ರೀತಿ ಲಾರಿಗಳಿಗೂ “ಮರಳು ಸಾಗಾಟದ ವಾಹನ” ಎಂದು ನಮೂದಿಸಬೇಕಾಗುತ್ತದೆ. ಈಗಾಗಲೇ ಜಿಪಿಎಸ್ ಪೂರೈಕೆಗೆ ಟೆಂಡರ್ ಕರೆಯಲಾಗಿದೆ. ಜಿಪಿಎಸ್ ಪೂರೈಸುವ ಸಂಸ್ಥೆಗೆ ಕಾರ್ಯಾದೇಶ ನೀಡಿದ 15 ದಿನಗಳೊಳಗೆ ಜಿಪಿಎಸ್ ಅಳವಿಕೆಯನ್ನು ಆಯಾ ತಾಲೂಕು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗುವುದು. ಬೋಟುಗಳಿಗೆ ಆಯಾ ಸ್ಥಳಗಳಿಗೆ ತೆರಳಿ ಜಿಪಿಎಸ್ ಅಳವಡಿಕೆಗೆ ಏರ್ಪಾಡು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮರಳು ಸಾಗಾಟದ ಪರ್ಮಿಟ್‍ನಲ್ಲಿಯೇ ವಾಹನದ ಸಂಖ್ಯೆ ನಮೂದಿಸಲಾಗುವುದು. ಮರಳುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ವಾಹನಗಳ ಮಾಹಿತಿಯನ್ನು ಕಡ್ಡಾಯವಾಗಿ ಗಣಿ ಇಲಾಖೆಗೆ ನೀಡಬೇಕಿದೆ ಎಂದು ಅವರು ತಿಳಿಸಿದರು.

ಅಕ್ರಮವಾಗಿ ಸಾಗಿಸಿ ವಶಪಡಿಸಿಕೊಂಡ ಮರಳು ಹಾಗೂ ವಾಹನಗಳನ್ನು ರಕ್ಷಿಸಿಡಲು ಪ್ರತೀ ತಾಲೂಕಿನಲ್ಲಿ ಯಾರ್ಡ್ ನಿರ್ಮಿಸಿ, ಬಂದೋಬಸ್ತ್ ಒದಗಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕೇರಳವನ್ನು ಸಂಪರ್ಕಿಸುವ 12 ರಸ್ತೆ ಹಾಗೂ ಜಿಲ್ಲೆಯಿಂದ ಹೊರಜಿಲ್ಲೆಗಳನ್ನು ಸಂಪರ್ಕಿಸುವ 8 ರಸ್ತೆಗಳಲ್ಲಿ ತನಿಖಾ ಠಾಣೆ ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ಹೇಳಿದರು.

ಸಿಆರ್‍ಝಡ್ ವ್ಯಾಪ್ತಿಯಲ್ಲಿ ಈಗಾಗಲೇ 41 ಮಂದಿಗೆ ಪರ್ಮಿಟ್ ನೀಡಲಾಗಿದೆ. ಇವರಿಗೆ ಮರಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು  ಸೂಚಿಸಲಾಗಿದೆ. ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಪರ್ಮಿಟ್ ರದ್ದುಪಡಿಸಲಾಗುವುದು. ಅದಲ್ಲದೇ, ನಿಯಮಗಳನ್ನು ಪೂರೈಸಿರುವ ಇನ್ನೂ ಕೆಲವು ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ನಾನ್ ಸಿಆರ್‍ಝಡ್ ವ್ಯಾಪ್ತಿಯಲ್ಲಿ ನೇತ್ರಾವತಿ ನದಿಯಲ್ಲಿ 3, ಫಲ್ಗುಣಿ ನದಿಯಲ್ಲಿ 2, ಗುಂಡ್ಯ ಹೊಳೆಯಲ್ಲಿ 1 ಹಾಗೂ ಕುಮಾರಧಾರ ನದಿಯಲ್ಲಿ 7 ಬ್ಲಾಕ್‍ಗಳನ್ನು ಮರಳುಗಾರಿಕೆಗೆ ಗುರುತಿಸಲಾಗಿದೆ. ಅಂದಾಜು 81 ಎಕರೆ ವ್ಯಾಪ್ತಿಯಲ್ಲಿ ಇದು ಹರಡಿಕೊಂಡಿದೆ. ಇದಕ್ಕೆ ಕೂಡಲೇ ಟೆಂಡರ್ ಕರೆದು ಹಂಚಿಕೆ ಮಾಡಲು  ಅವರು ಗಣಿ ಇಲಾಖೆಗೆ ಸೂಚಿಸಿದರು.

ಎರಡು ಪಟ್ಟು ಬ್ಯಾಂಕ್ ಗ್ಯಾರೆಂಟಿ: ರಾಜ್ಯ ಸರಕಾರ ತಿದ್ದುಪಡಿ ಮಾಡಿರುವ ಖನಿಜ ನಿಯಮಾವಳಿಯಂತೆ ಅಕ್ರಮವಾಗಿ ಮರಳು ಸಾಗಿಸುವುದು ಕಂಡುಬಂದಲ್ಲಿ ಅಂತಹ ಲಾರಿಯನ್ನು  ವಶಪಡಿಸಿ, ಪ್ರಕರಣ ದಾಖಲಿಸಲಾಗುವುದು. ಇಂತಹ ವಾಹನಗಳನ್ನು ಬಿಡುಗಡೆ ಮಾಡಲು ನ್ಯಾಯಾಲಯದಲ್ಲಿ ವಾಹನದ ಮೌಲ್ಯದ ಎರಡು ಪಟ್ಟಿನಷ್ಟು  ಬ್ಯಾಂಕ್ ಗ್ಯಾರಂಟಿ ನೀಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ,  ಅಪರ ಜಿಲ್ಲಾಧಿಕಾರಿ ಕುಮಾರ್, ಡಿಸಿಪಿ ಉಮಾ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಸುಮಿತ್ರಾ ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version