ಕಾಂಗ್ರೆಸ್ ಗೂಂಡಾಗಿರಿಗೆ ಸೂಕ್ತ ಉತ್ತರ – ನಳಿನ್‌ಕುಮಾರ್ ಕಟೀಲ್

Spread the love

ಕಾಂಗ್ರೆಸ್ ಗೂಂಡಾಗಿರಿಗೆ ಸೂಕ್ತ ಉತ್ತರ – ನಳಿನ್‌ಕುಮಾರ್ ಕಟೀಲ್

ಮಂಗಳೂರು: ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್‌ಕುಮಾರ್ ಕಟೀಲ್ ಖಂಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಿನ ಭೀತಿ ಎದುರಾಗಿದೆ. ಇದರಿಂದ ಹತಾಶರಾಗಿರುವ ಕಾಂಗ್ರೆಸ್ ನಾಯಕರು ಗೂಂಡಾಗಿರಿ ನಡೆಸಲು ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸುತ್ತಿದ್ದಾರೆ. ಶಾಸಕರ ದರ್ಪಕ್ಕೆ ಬಿಜೆಪಿ ಕಾರ್ಯಕರ್ತರು ಅಂಜುವುದಿಲ್ಲ. ಜನತೆ ಕೂಡಾ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ. ಶಾಂತಿ ಕದಡಲು ಯತ್ನಿಸಿದ ಶಾಸಕರ ಬೆಂಬಲಿಗರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ನಳಿನ್‌ಕುಮಾರ್ ಆಗ್ರಹಿಸಿದ್ದಾರೆ.


Spread the love