ಕಾಟಿಪಳ್ಳದಲ್ಲಿ ಹಿಂದೂ ಕಾರ್ಯಕರ್ತನನ್ನು ಕಡಿದು ಕೊಲೆ ಮಾಡಿದ ದುಷ್ಕರ್ಮಿಗಳು

Spread the love

ಕಾಟಿಪಳ್ಳದಲ್ಲಿ ಹಿಂದೂ ಕಾರ್ಯಕರ್ತನನ್ನು ಕಡಿದು ಕೊಲೆ ಮಾಡಿದ ದುಷ್ಕರ್ಮಿಗಳು

ಮಂಗಳೂರು: ಕಾಟಿಪಳ್ಳ ವೃತ್ತದ ಬಳಿ ದುಷ್ಕರ್ಮಿಗಳು ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಗಳವಾರ ನಡೆದಿದೆ.

ಕೊಲೆಯಾದ ಯುವಕನನ್ನು ಕಾಟಿಪಳ್ಳ ಕೈಕಂಬದ ನಿವಾಸಿ ದೀಪಕ್ ರಾವ್ (32) ಎಂದು ಗುರುತಿಸಲಾಗಿದೆ.

ಮಂಗಳವಾರ ಮದ್ಯಾಹ್ನ ದೀಪಕ್ ಅವರು ದ್ವಿಚಕ್ರ ವಾಹನದಲ್ಲಿ ಕೃಷ್ಣಾಪುರ-ಕಾಟಿಪಳ್ಳ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ, ಕಾರೊಂದು ಹಿಂಬಾಲಿಸಿಕೊಂಡು ಬಂದು ಕಾಟಿಪಳ್ಳದಲ್ಲಿ ಅವರ ಬೈಕನ್ನು ಅಡ್ಡಗಟ್ಟಿ, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಧಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ದೀಪಕ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರು ಅವರು ಆಗಲೇ ಮೃತಪಟ್ಟಿದ್ದರು.

ಸುರತ್ಕಲ್ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love