Home Mangalorean News Kannada News ಕಾರು ಢಿಕ್ಕಿಯಾಗಿ ಗಾಯಗೊಂಡ ವಿದ್ಯಾರ್ಥಿನಿ ನಿಕಿತಾ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಕಾರು ಢಿಕ್ಕಿಯಾಗಿ ಗಾಯಗೊಂಡ ವಿದ್ಯಾರ್ಥಿನಿ ನಿಕಿತಾ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Spread the love

ಕಾರು ಢಿಕ್ಕಿಯಾಗಿ ಗಾಯಗೊಂಡ ವಿದ್ಯಾರ್ಥಿನಿ ನಿಕಿತಾ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಮಂಗಳೂರು: ಮಂಗಳೂರು ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವು-ಬದುಕಿನ ಹೋರಾಟ ನಡೆಸಿದ ಪಿಯುಸಿ ವಿದ್ಯಾರ್ಥಿನಿ ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಖೇದಕರ ಘಟನೆ ವರದಿಯಾಗಿದೆ.

ಅಲೋಶಿಯಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ಹದಿನಾರರ ಹರಯದ ನಿಕಿತಾ ಸಾವನ್ನಪ್ಪಿದ ದುರ್ದೈವಿ.

ಬಿಜೈ ಕಾಪಿಕಾಡ್ನಲ್ಲಿ ಬೆಂಗಳೂರಿನ ಶರ್ಮಿಳಾ ಎಂಬವರು ಚಲಾಯಿಸುತ್ತಿದ್ದ ಕಾರು ದೇರೆಬೈಲ್ ಚರ್ಚ್ ಎದುರು ನೊರಿನ್ ಕ್ರಾಸ್ತಾ ಮತ್ತು ಜೆರೊಂ ಕುಟಿನ್ಹಾ ದಂಪತಿಯ ಪುತ್ರಿ ನಿಖಿತಾ ಅವರಿಗೆ ಗುದ್ದಿತ್ತು.

ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ನಿಕಿತಾ ತಲೆಗೆ ಗಂಭೀರ ಗಾಯಗಳಾಗಿದ್ದರಿಂದ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.


Spread the love

Exit mobile version