ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಯುವತಿ ಸಾವು

Spread the love

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ – ಯುವತಿ ಸಾವು

ಮಂಗಳೂರು:  ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಗರದ ಹೊರ ವಲಯದ ಬೆಂಜನಪದವು ದಿವ್ಯಜ್ಯೋತಿ ಅಂಗಡಿ ಎದುರು ಬುಧವಾರ ಸಂಭವಿಸಿದೆ.

ಮೃತ ಯುವತಿ ಬೆಂಜನಪದವು ನಿವಾಸಿಯಾಗಿದ್ದು ಹೆಸರು ತಿಳಿದು ಬಂದಿಲ್ಲ.

 ಯುವತಿ ತನ್ನ ಸ್ನೇಹಿತೆಯ ಜೊತೆಗೆ ಮೊಬೈಲ್ ರಿಚಾರ್ಜ್ ಮಾಡಿಸಲು ಅಂಗಡಿಗೆ ಹೋಗುತ್ತಿದ್ದಾಗ ಕಾರ್ ಬಡಿದಿದ್ದು  ಮತ್ತೊಬ್ಬ ಯುವತಿಯನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಹೆಚ್ಚಿನ ಮಾಹಿತಿ ಲಭಿಸಿಲ್ಲ. ಕಾರಿನ ಚಾಲಕ ಘಟನಾಸ್ಥಳದಿಂದ ಪರಾರಿಯಾಗಿದ್ದಾನೆ.


Spread the love