Home Mangalorean News Kannada News ಕಾವ್ಯಾ ಮನೆಗೆ ಸಚಿವ ರಮಾನಾಥ ರೈ ಮತ್ತು ಶಾಸಕಿ ಶಕುಂತಳಾ ಶೆಟ್ಟಿ ಭೇಟಿ – ಸಾಂತ್ವಾನ

ಕಾವ್ಯಾ ಮನೆಗೆ ಸಚಿವ ರಮಾನಾಥ ರೈ ಮತ್ತು ಶಾಸಕಿ ಶಕುಂತಳಾ ಶೆಟ್ಟಿ ಭೇಟಿ – ಸಾಂತ್ವಾನ

Spread the love

ಕಾವ್ಯಾ ಮನೆಗೆ ಸಚಿವ ರಮಾನಾಥ ರೈ ಮತ್ತು ಶಾಸಕಿ ಶಕುಂತಳಾ ಶೆಟ್ಟಿ ಭೇಟಿ – ಸಾಂತ್ವಾನ

ಮೂಡಬಿದರೆ: ಇತ್ತೀಚಿಗೆ ಅಸಹಜ ಸಾವಿಗೀಡಾದ ಆಳ್ವಾಸ್ ಕಾಲೇಜಿನ ವಿದ್ಯಾಥಿ೯ನಿ ಕಾವ್ಯಾ ಮನೆಗೆ ಅರಣ್ಯ, ಪರಿಸರ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ  ಭಾನುವಾರ ಭೇಟಿ ನೀಡಿದರು. ಕಾವ್ಯಾ ಹೆತ್ತವರೊಂದಿಗೆ ಮಾತನಾಡಿದ  ಸಚಿವರು ಅವರನ್ನು ಸಂತೈಸಿದರು.

ಬಳಿಕ ಸಚಿವರು ಮಾತನಾಡಿ, ಈ ಪ್ರಕರಣದಲ್ಲಿ ಕೆಲವೊಂದು ಸಂಶಯಗಳು ಕಾವ್ಯಾ ಮನೆಯವರಲ್ಲಿದೆ. ಇದರ ಸತ್ಯಾಸತ್ಯತೆಗಳು ಹೊರಗೆ ಬರಬೇಕೆಂದು ಅವರು ಅಪೇಕ್ಷಿಸಿದ್ದಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಪ್ರಾಮಾಣಿಕವಾಗಿ ತನಿಖೆ ನಡೆಸಲಿದೆ ಎಂದು ಹೇಳಿದರು.

 ಕಾವ್ಯಾ ಉತ್ತಮ ಕ್ರೀಡಾಪಟು ಆಗಿದ್ದು, ಈ ನಿಟ್ಟಿನಲ್ಲಿ ಅವಳ ಕುಟುಂಬಕ್ಕೆ ರಾಜ್ಯ ಸರಕಾರ ಗರಿಷ್ಟ ನೆರವು ನೀಡಲಿದೆ ಎಂದು ಸಚಿವ ರಮಾನಾಥ ರೈ ತಿಳಿಸಿದರು.

 ಸಚಿವರೊಂದಿಗೆ ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ,  ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಸ್ಥಳೀಯ ಮುಖಂಡರು ಇದ್ದರು.


Spread the love

Exit mobile version