ಕುಂದಾಪುರ| ಅಕ್ರಮ ಮರಳು ಸಾಗಾಟ: ದೋಣಿ, ಟಿಪ್ಪರ್ ಸಹಿತ ಒರ್ವ ವ್ಯಕ್ತಿ ಪೊಲೀಸ್ ವಶಕ್ಕೆ

Spread the love

ಕುಂದಾಪುರ| ಅಕ್ರಮ ಮರಳು ಸಾಗಾಟ: ದೋಣಿ, ಟಿಪ್ಪರ್ ಸಹಿತ ಒರ್ವ ವ್ಯಕ್ತಿ ಪೊಲೀಸ್ ವಶಕ್ಕೆ

ಕುಂದಾಪುರ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವ್ಯಕ್ತಿ ಹಾಗೂ ಸೊತ್ತನ್ನು ಕುಂದಾಪುರ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

ಭಾನುವಾರ ನಾನಾ ಸಾಹೇಬ್ ರಸ್ತೆಯ ಕೊನೆಯಲ್ಲಿ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆಯಲ್ಲಿ ಕೆಲವು ಜನರು ಮರಳನ್ನು ತೆಗೆದು ದೋಣಿಯಲ್ಲಿ ತುಂಬಿಸುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ನಂಜಾನಾಯ್ಕ್ , ಪೊಲೀಸ್ ಉಪನಿರೀಕ್ಷಕರು, ಕುಂದಾಪುರ ಪೊಲೀಸ್ ಠಾಣೆ ಇವರು ಸ್ಥಳಕ್ಕೆ ದಾಳಿ ಮಾಡಿ ಆರೋಪಿತ ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಇನ್ನೋರ್ವ ವ್ಯಕ್ತಿ ಸುನಿಲ್ ಎಂಬಾತನು ಓಡಿ ಹೋಗಿರುತ್ತಾನೆ.

ಆರೋಪಿತರು ಸಂಘಟಿತರಾಗಿ ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸಿರುವುದು ಕಂಡುಬಂದಿರುವುದರಿಂದ ಸ್ಥಳದಲ್ಲಿದ್ದ ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ-1(ಅಂದಾಜು ಮೌಲ್ಯ-15,000/-), 1 ½ ಯುನಿಟ್ ಮರಳು(ಅಂದಾಜು ಮೌಲ್ಯ-5,000/-), KA20 C6070ನೇ 407 ಟಿಪ್ಪರ್ ವಾಹನ(ಅಂದಾಜು ಮೌಲ್ಯ-5,00,000/-) ಹಾಗೂ ಕಬ್ಬಿಣದ ಹಾರೆ-1, ಫೈಬರ ಬುಟ್ಟಿಗಳು-2 ನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 66/2025 ಕಲಂ: 303(2), 112 BNS & ಕಲಂ: 4, 4(1) (a), 21 Mines and minerals Regulation of development act ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Spread the love
Subscribe
Notify of

0 Comments
Inline Feedbacks
View all comments