ಕುಂದಾಪುರ: ಐಸೋಲೇಟೆಡ್ ವಾರ್ಡಿನಲ್ಲಿ ಚಿಕಿತ್ಸೆಗೆ ನಿರಾಕರಿಸಿದ ಯುವಕ – ಜಿಲ್ಲಾಧಿಕಾರಿ ಸ್ಪಷ್ಟನೆ

Spread the love

ಕುಂದಾಪುರ: ಐಸೋಲೇಟೆಡ್ ವಾರ್ಡಿನಲ್ಲಿ ಚಿಕಿತ್ಸೆಗೆ ನಿರಾಕರಿಸಿದ ಯುವಕ – ಜಿಲ್ಲಾಧಿಕಾರಿ ಸ್ಪಷ್ಟನೆ

ಕುಂದಾಪುರ: ವಿದೇಶದಿಂದ ಆಗಮಿಸಿದ್ದ ಕರೋನಾ ಶಂಕಿತ ವ್ಯಕ್ತಿಯೊಬ್ಬರು ಕುಂದಾಪುರ ಸರಕಾರಿ ಆಸ್ಪತ್ರೆಯ ಐಸೋಲೆಟೆಡ್ ವಾರ್ಡಿನಲ್ಲಿ ಚಿಕಿತ್ಸೆ ನಿರಾಕರಿಸಿದ ಘಟನೆ ಗುರುವಾರ ಸಂಭವಿಸಿದೆ.

ವಿದೇಶದಿಂದ ಬಂದಿರುವ ಬೈಂದೂರು ಮೂಲದ ಯುವಕನನ್ನು ಚಿಕಿತ್ಸೆಗಾಗಿ ಕುಂದಾಪುರದ ಸರಕಾರಿ ಆಸ್ಪತ್ರೆಯ ಐಸೋಲೇಟೆಡ್ ವಾರ್ಡಿನಲ್ಲಿ ದಾಖಲಾಗುವಂತೆ ವೈದ್ಯರು ಸೂಚಿಸಿದ್ದು ಅದಕ್ಕೆ ನಿರಾಕರಿಸಿ ಆಸ್ಪತ್ರೆಯಿಂದ ತೆರಳಿದ್ದ ಎನ್ನಲಾಗಿದೆ. ಆದ್ದರಿಂದ ತಾಲೂಕು ವೈದ್ಯಾಧಿಕಾರಿಗಳು ಯುವಕನ ಪತ್ತೆಗೆ ಕುಂದಾಪುರ ಪೊಲೀಸರ ಸಹಾಯ ಕೋರಿದ್ದು, ಪೊಲೀಸರ ಸಹಕಾರದಿಂದ ಯುವಕನನ್ನು ಪತ್ತೆಹಚ್ಚಲಾಗಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಿ ಹೋಗಿದ್ದ , ಶಂಕಿತ ಕರೋನ ರೋಗಿಯನ್ನು , ಪೊಲೀಸರು ಪತ್ತೆ ಹಚ್ಚಿ , ವೈದ್ಯರ ಮುಂದೆ ಹಾಜರುಪಡಿಸಿದ್ದು , ಆತನಿಗೆ ಕಡ್ಡಾಯ ಹೋಂ ಕ್ವಾರಂಟೈನ್ ವಿಧಿಸಲಾಗಿದೆ . ಸಾರ್ವಜನಿಕರು ಯಾವುದೇ ಆತಂಕ ಪಡದಂತೆ ಸ್ಪಷ್ಟಪಡಿಸಿದ್ದಾರೆ.


Spread the love