ಕುಂದಾಪುರ: ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ – ಏಳು ಮಂದಿ ಬಂಧನ

Spread the love

ಕುಂದಾಪುರ: ಐ.ಪಿ.ಎಲ್ ಕ್ರಿಕೆಟ್ ಬೆಟ್ಟಿಂಗ್ – ಏಳು ಮಂದಿ ಬಂಧನ

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಏಳು ಮಂದಿಯನ್ನು ಕುಂದಾಪುರ ನಗರ ಠಾಣಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತರನ್ನು ಕೋಟೇಶ್ವರ ಬೀಜಾಡಿ ನಿವಾಸಿ ರಾಘವೇಂದ್ರ (38), ಶ್ರುತಿ ರಾಜ್ (28), ಸುಭಾಶ್ (29), ಸರ್ಫರಾ್ಜ್ (35), ಮುರಳಿ (30), ರತೀಶ್ (35) ಮತ್ತು ರಾಘವೇಂದ್ರ ಬೀಜಾಡಿ (37) ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ ಕೋಟೇಶ್ವರ ಜ್ಯೂನಿಯರ್ ಕಾಲೇಜು ಬಳಿ ಐಪಿಎಲ್ ಕ್ರಿಕೆಟ್ ಪಂದ್ಯಾಟದ ಸೋಲು ಗೆಲುವಿನ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಬಂದ ಮೇರೆಗೆ ಕುಂದಾಪುರ ಠಾಣಾಧಿಕಾರಿ ಸದಾಶಿವ ಗವರೋಜಿ ಮತ್ತವರ ತಂಡ ದಾಳಿ ನಡೆಸಿ ರಾಜಸ್ಥಾನ ರಾಯಲ್ಸ್ ರೂ 1000ಕ್ಕೆ 1000 ರೂ, ಡೆಲ್ಲಿ ಕ್ಯಾಪಿಟಲ್ಸ್ 1000 ಕ್ಕೆ 1300 ಹೇಳಿ ಹಣದ ಬೆಟ್ಟಿಂಗ್ ನಡೆಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ವೇಳೆ ಏಳು ಮಂದಿಯನ್ನು ಬಂಧೀಸಿದ್ದಾರೆ.

ಬಂಧಿತರಿಂದ ಬೆಟ್ಟಿಂಗ್ ನಡೆಸಲು ಉಪಯೋಗಿಸಿದ ನಗದು ರೂ 29,000/-, ರೆಡ್ ಮಿ ಮೊಬೈಲ್ ಫೋನ್-1 ಹಾಗೂ ಒಂದು ನೋಟ್ ಪುಸ್ತಕವನ್ನು ವಶಪಡಿಸಿಕೊಳ್ಳಲಾಗಿದೆ.
ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love