Home Mangalorean News Kannada News ಕುಂದಾಪುರ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಡಿಸಿಐಬಿ ಪೊಲೀಸರು

ಕುಂದಾಪುರ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಡಿಸಿಐಬಿ ಪೊಲೀಸರು

Spread the love

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಡಿಸಿಐಬಿ ಪೊಲೀಸರು

ಕುಂದಾಪುರ: ಮಾರಾಟಕ್ಕಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಡಿಸಿಐಬಿ ಪೊಲೀಸರ ತಂಡ ಗುರುವಾರ ರಾತ್ರಿ ಕುಂದಾಪುರ ಕೋಡಿಯಲ್ಲಿ ಬಂಧಿಸಿದೆ.

ಬಂಧಿತ ಆರೋಪಿಯನ್ನು ಕುಂದಾಪುರದ ಕೋಡಿ ಮುಲ್ಲಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಅಬ್ದುಲ್ ರೆಹಮಾನ್ (24) ಎಂದು ಗುರುತಿಸಲಾಗಿದೆ. ಆತನಿಗೆ ಗಾಂಜಾ ನೀಡಿದ ಮಸೂದ್ ಯಾನೆ ಚಿನ್ನು ಪರಾರಿಯಾಗಿದ್ದಾನೆ. ಬಂಧಿತನಿಂದ 33 ಸಾವಿರ ಮೌಲ್ಯದ 1 ಕೆ.ಜಿ.100 ಗ್ರಾಂ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆಯಲಾಗಿದೆ.

ರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್, ಮಸೂದ್ ಯಾನೆ ಚಿನ್ನು ಎಂಬವನಿಂದ ಗಾಂಜಾ ತೆಗೆದುಕೊಂಡು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಈ ವೇಳೆ ಖಚಿತ ಮಾಹಿತಿ ಪಡೆದ ಉಡುಪಿ ಡಿಸಿಐಬಿ ಇನ್ಸ್ಪೆಕ್ಟರ್ ಮಂಜಪ್ಪ ಡಿ.ಆರ್ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಕುಂದಾಪುರ ಕೋಡಿ ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿ ಮೊಹಮ್ಮದ್ ಅಬ್ದುಲ್ ರೆಹಮಾನ್ನಿಂದ 33 ಸಾವಿರ ಮೌಲ್ಯದ ಗಾಂಜಾ ಹಾಗೂ 10,000 ರೂಪಾಯಿ ಮೌಲ್ಯದ ಮೊಬೈಲ್ ಪೋನ್ಗಳನ್ನು ವಶಕ್ಕೆ ಪಡೆಯಲಾಗಿದೆ


Spread the love

Exit mobile version