ಕುಂದಾಪುರ: ಬಿಎಸ್‌ಎನ್‌ಎಲ್ ಟವರ್ ಕಟ್ಟಡದಲ್ಲಿನ ಬ್ಯಾಟರಿ ಕಳವು ಪ್ರಕರಣ; ಮೂವರ ಬಂಧನ

Spread the love

 ಕುಂದಾಪುರ: ಬಿಎಸ್‌ಎನ್‌ಎಲ್ ಟವರ್ ಕಟ್ಟಡದಲ್ಲಿನ ಬ್ಯಾಟರಿ ಕಳವು ಪ್ರಕರಣ; ಮೂವರ ಬಂಧನ

ಕುಂದಾಪುರ: ತಾಲೂಕಿನ ಶಂಕರನಾರಾಯಣ ಗ್ರಾಮ ಪಂಚಾಯತ್ ಎದುರಿನ ಗೋಳಿಕಟ್ಟೆ ಗುಡ್ಡೆಯ ಮೇಲಿನ ಬಿ.ಎಸ್.ಎನ್.ಎಲ್ ಮೈಕ್ರೋ ಟವರ್ ಕಟ್ಟಡದ ಒಳಗೆ ಅಳವಡಿಸಿದ್ದ 24 ನಿರುಪಯುಕ್ತ ಬ್ಯಾಟರಿಗಳಲ್ಲಿ 6 ಬ್ಯಾಟರಿಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉದ್ಯಾವರ ಪಿತ್ರೋಡಿ ಸಮೀಪದ ನಿವಾಸಿ ಕೃಷ್ಣ (45), ಬಂಟ್ವಾಳ ಫರಂಗಿಪೇಟೆ ಮೇರಮಜಲು ಮೂಲದ ಬದ್ರುರುದ್ದೀನ್ (38) ಹಾಗೂ ಹೊನ್ನಾವರ ಕರ್ಕಿ ಮೂಲದ, ಪ್ರಸ್ತುತ ಲಕ್ಷ್ಮೀನಗರ ನಿವಾಸಿ ಉಸ್ಮಾನ್ (38)  ಎಂದು ಗುರುತಿಸಲಾಗಿದೆ.

ನ.23‌ರಿಂದ ನ.27 ಮಧ್ಯಾವಧಿಯಲ್ಲಿ ನಡೆದ ಘಟನೆ ಇದಾಗಿದ್ದು ಕಳ್ಳರು ಬಿ.ಎಸ್.ಎನ್.ಎಲ್ ಟವರ್ ಕಟ್ಟಡದ ಒಳಗೆ ಪ್ರವೇಶಿಸಿ ಒಳಗೆ ಇರಿಸಿದ್ದ ಬ್ಯಾಟರಿಗಳನ್ನು ಕಳವುಗೈದ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ನ.28 ರಂದು ಶಂಕರನಾರಾಯಣ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಬ್ಯಾಟರಿ ಹಾಗೂ ಕಳ್ಳತನಕ್ಕೆ ಬಳಸಿದ ಪಿಕಪ್ ವಾಹನ ಸಮೇತ ಸುಮಾರು 4,60,000 ರೂಪಾಯಿ ಮೌಲ್ಯದ ಸೊತ್ತು ಮತ್ತು ವಾಹನವನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


Spread the love