ಕುಂದಾಪುರ: ಹತ್ರಾಸ್ ನ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಎಬಿವಿಪಿ ಪ್ರತಿಭಟನೆ

Spread the love

ಕುಂದಾಪುರ: ಹತ್ರಾಸ್ ನ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಎಬಿವಿಪಿ ಪ್ರತಿಭಟನೆ

ಕುಂದಾಪುರ: ಉತ್ತರ ಪ್ರದೇಶದ ಹತ್ರಾಸ್ ನ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ, ಸೂಕ್ತ ತನಿಖೆಯೊಂದಿಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಮಂಗಳವಾರ ಕುಂದಾಪುರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮುಖಂಡ ಪ್ರಜ್ವಲ್, ಯುವತಿ ಮೇಲೆ ನಡೆದ ಅಮಾನವೀಯ ಅತ್ಯಾಚಾರ ಪ್ರಕರಣವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರನ್ನು ಪೂಜಿಸುವ ಪರಂಪರೆಯನ್ನು ಹೊಂದಿರುವ ಜಗತ್ತಿನ ಶ್ರೇಷ್ಠ ದೇಶದಲ್ಲಿ ಇಂತಹ ಕ್ರೂರ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುಃಖಕರ ಮತ್ತು ವಿಷಾದನೀಯ ಸಂಗತಿಯಾಗಿದೆ. ಅತ್ಯಾಚಾರದಿಂದಾಗಿ ಯುವತಿಯು ಸಾವನ್ನಪ್ಪಲು ಕಾರಣರಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ತಾಲೂಕಿನ ಕಾರ್ಯಕರ್ತರಾದ ನಿರಂಜನ್, ದೀಪಕ್, ಪ್ರತ್ವಿಕ್, ಪದ್ಮನಾಭ, ಅಭಿಷೇಕ್, ಶಶಿಕಿರಣ್ ಮುಂತಾದವರು ಉಪಸ್ಥಿರಿದ್ದರು.


Spread the love