ಕುಂದಾಬಾರಂದಾಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಲೋಕಾರ್ಪಣೆ

Spread the love

ಕುಂದಾಬಾರಂದಾಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಬಸ್ಸು ತಂಗುದಾಣ ಲೋಕಾರ್ಪಣೆ

ಕುಂದಾಪುರ: ದಾನಿಗಳ ನೆರವಿನಿಂದ ಇಲ್ಲಿನ ಹಕ್ಲಾಡಿ ಗ್ರಾಮದ ಕುಂದಬಾರಂದಾಡಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡ ಸೂಪರ್ ಸ್ಪೆಷಾಲಿಟಿ ತಂಗುದಾಣವನ್ನು ಸಾರ್ವಜನಿಕ ಸೇವೆಗಾಗಿ ಬುಧವಾರ ಲೋಕಾರ್ಪಣೆಗೊಳಿಸಲಾಯಿತು.

ಹೊಳ್ಮಗೆ ಕರುಣಾಕರ ಶೆಟ್ಟಿ ಕಾವ್ರಾಡಿ ಸ್ಮರಣಾರ್ಥ ಅವರ ಪುತ್ರ ನಿಕಟಪೂರ್ವ ಹಕ್ಲಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಭಾಸ್ ಶೆಟ್ಟಿ ಹೊಳ್ಮಗೆ ಹಾಗೂ ಸಹೋದರಿಯರು 15 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸೂಪರ್ ಸ್ಪೆಷಾಲಿಟಿ ತಂಗುದಾಣವನ್ನು ದಿ.ಕರುಣಾಕರ ಶೆಟ್ಟಿಯವರ ಒಡನಾಡಿ ನಿವೃತ್ತ ಶಿಕ್ಷಕ ಗೋಪಾಲ ಶೆಟ್ಟಿ ಉದ್ಘಾಟಿಸಿದರು.

ಹಕ್ಲಾಡಿ ಚೆನ್ನಕೇಶವ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಾಳೆಮನೆ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಅಧ್ಯಕ್ಷ ಎನ್.ಎಂ.ಹೆಗ್ಡೆ, ಲಯನ್ಸ್ ಪದಾಧಿಕಾರಿಗಳಾದ ವಿ.ಜಿ.ಶೆಟ್ಟಿ, ಶಂಕರ ಹೆಗ್ಡೆ ಹೊಳ್ಮಗೆ, ಹಕ್ಲಾಡಿ ಗ್ರಾಪಂ ಪಿಡಿಒ ಚಂದ್ರ ಬಿಲ್ಲವ, ಉಮಾನಾಥ ಹೆಗ್ಡೆ ಸಲ್ವಾಡಿ ಇದ್ದರು.

ಹಕ್ಲಾಡಿ ಕೊಳ್ಳೆಬೈಲು ಸೂರಪ್ಪ ಶೆಟ್ಟಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಡಾ.ಕಿಶೋರ್ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಶಿಕ್ಷಕ ಸಂಜೀವ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.


Spread the love