ಕುಡಿದ ಮತ್ತಿನಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ಮೂವರು ಯುವಕರು; ಇಬ್ಬರ ಬಂಧನ

Spread the love

ಕುಡಿದ ಮತ್ತಿನಲ್ಲಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ ಮೂವರು ಯುವಕರು; ಇಬ್ಬರ ಬಂಧನ

ಮಂಗಳೂರು: ಕುಡಿದ ಮತ್ತಿನಲ್ಲಿ ಮೂವರು ಯುವಕರು ಬೈಕ್ ಸವಾರನೋರ್ವನಿಗೆ ಹಲ್ಲೆ ನಡೆಸಿದ ಘಟನೆ ಬೆಂದೂರು ಕುಮಾರ್ ಇಂಟರನ್ಯಾಷನಲ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ಮೂವರು ಯುವಕರು ಅಮಲು ಪದಾರ್ಥ ಸೇವಿಸಿ ಒಂದೇ ಬೈಕಿನಲ್ಲಿ ಹೋಗುತ್ತಿದ್ದು, ಕುಮಾರ್ ಇಂಟರ್ ನ್ಯಾಷನಲ್ ಹೋಟೇಲಿನ ಬಳಿ ಸ್ಪೀಡ್ ಬ್ರೇಕರ್ ತಪ್ಪಿಸುವ ಸಲುವಾಗಿ ತಮ್ಮ ಬೈಕನ್ನು ಬಲಕ್ಕೆ ತಿರುಗಿಸಿದ್ದು, ನಿಯಂತ್ರಣ ತಪ್ಪಿ ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದರೆನ್ನಲಾಗಿದೆ. ಕುಡಿದ ಅಮಲಿನಲ್ಲಿದ್ದ ಅವರು ಹಿಂದಿನಿಂದ ಬಂದ ಇನ್ನೊಂದು ಬೈಕ್ ಸವಾರ ತಮ್ಮ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಇದರಿಂದ ತಾವು ಬಿದ್ದಿದ್ದು ಎಂದು ಆ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದಾರೆ.

ಮಾಹಿತಿ ತಿಳಿದು ಕದ್ರಿ ಪೋಲಿಸರು ಸ್ಥಳಕ್ಕೆ ಧಾವಿಸಿದ್ದು, ಇಬ್ಬರು ಯುವಕರನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಯುವಕ ನಾಪತ್ತೆಯಾಗಿದ್ದಾನೆ.


Spread the love