ಕೆಜೆ ಹಳ್ಳಿಯಲ್ಲಿ ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು- ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಆಗ್ರಹ

Spread the love

ಕೆಜೆ ಹಳ್ಳಿಯಲ್ಲಿ ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು- ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಆಗ್ರಹ

ಉಡುಪಿ: ಬೆಂಗಳೂರಿನ ಕೆಜೆ ಹಳ್ಳಿಯಲ್ಲಿ ಕಾನೂನು ಕೈಗೆತ್ತಿಕೊಂಡರವರಿಗೆ ಕಠಿಣ ಶಿಕ್ಷೆ ನೀಡುವಂತೆ ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಆಗ್ರಹಿಸಿದ್ದಾರೆ.

ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ನೀಚ ಕೃತ್ಯವನ್ನು ಖಂಡಿಸುತ್ತೇನೆ. ಬೆಂಗಳೂರಿನ ಕಾವಲ್ ಸಂದ್ರ ಪೊಲೀಸ್ ವಸತಿಗೃಹದ ಗೇಟ್ ಮುರಿದು ಪೊಲೀಸರ ಮನೆಗಳಿಗೆ ನುಗ್ಗಿ ಮಕ್ಕಳ, ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು .

ಅದೇ ರೀತಿ ಈ ಘಟನೆ ಸಮಯದಲ್ಲಿ ಆ ಘಟನೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿದ ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಜ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಯಿರವರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿರುವ ಅವರು ಕೈಯಲ್ಲಿ ಮಾರಕಾಯುಧಗಳನ್ನು ಹಿಡಿದು ಬಂದ ಮತಾಂಧ ಉಗ್ರರು ಪೊಲೀಸರ ವಾಹನಗಳನ್ನು ಪುಡಿ ಮಾಡಿ, ಬೆಂಕಿ ಹಚ್ಚಿ, ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿದ್ದು ಅಂತಹ ನೀಚರು ಈ ಭೂಮಿಯ ಮೇಲೆ ಬದುಕುವುದಕ್ಕೆ ಅರ್ಹರಲ್ಲ.

ಈ ಒಂದು ಘಟನೆಯಿಂದ ಆದ ಹಾನಿಗಳನ್ನು ಹಾಗೂ ನಷ್ಟಗಳನ್ನು, ಘಟನೆಗೆ ಪ್ರಚೋದನೆ ನೀಡಿದ ಮತ್ತು ಈ ಘಟನೆಯಲ್ಲಿ ಭಾಗಿಯಾದವರಿಂದಲೆ ಭರಿಸುವ ಕೆಲಸ ವನ್ನು ಪೋಲೀಸ್ ಇಲಾಖೆ ಮತ್ತು ಕಾನೂನಿನ ಮೂಲಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ


Spread the love