ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮಂಗಳೂರಿಗೆ

Spread the love

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಮುಂಬಯಿ ಸಂಸದ ಗೋಪಾಲ ಶೆಟ್ಟಿ ಮಂಗಳೂರಿಗೆ

ಮಂಗಳೂರು :ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಂiÀi ತಯಾರಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಸರಕಾರದ ಪೆಟ್ರೋಲಿಯಂ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಮುಂಬಯಿ ಸಂಸದರಾದ ಶ್ರೀ ಗೋಪಾಲ್ ಶೆಟ್ಟಿಯವರು ಭೇಟಿ ನೀಡಲಿರುವರು.

ತಾರೀಕು 24/03/2018 ಶನಿವಾರದಂದು ಶ್ರೀ ಧರ್ಮೇಂದ್ರ ಪ್ರಧಾನ್‍ರವರು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳ ಹಾಲ್‍ನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತ್ತು ಸಂಜೆ 3 ಗಂಟೆಗೆ ಬಿಲ್ಲವ ಸಭಾಂಗಣದಲ್ಲಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಹಾಗೂ 25/03/2018 ರಂದು ಪೂರ್ವಹ್ನ 10.30 ಗಂಟೆಗೆ ಕಾವೂರಿನ ಸೊಸೈಟಿ ಹಾಲ್‍ನಲ್ಲಿ ಉತ್ತರ ವಿಧಾನಸಭಾ ಕ್ಷೇತ್ರದ ಮತ್ತು ಸಂಜೆ 3.00 ಗಂಟೆಗೆ ಕೆನರಾ ಹೈಸ್ಕೂಲಿನ ಸುಧೀಂದ್ರ ಸಭಾಭವನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು.

ಗೋಪಾಲ್ ಶೆಟ್ಟಿಯವರು ತಾರೀಕು 24/03/2018 ಶನಿವಾರ ಪೂರ್ವಹ್ನ 11 ಗಂಟೆಗೆ ಎಮ್ನೂರಿನ ಭಜನಾ ಮಂದಿರದ ಸಭಾಂಗಣದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಮತ್ತು 3 ಗಂಟೆಗೆ ಟೌನ್ ಬ್ಯಾಂಕ್ ಹಾಲ್ ಸಭಾಂಗಣದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಹಾಗೂ ತಾರೀಕು 25/03/2018 ರಂದು ಪೂರ್ವಹ್ನ 10 ಗಂಟೆಗೆ ಸೌಭಾಗ್ಯ ಸದನ ಕೊಲ್ಯದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮತ್ತು ಅಪರಾಹ್ನ 2 ಗಂಟೆಗೆ ಬಿ.ಸಿ ರೋಡ್‍ನ ರಂಗೋಲಿ ಹಾಲ್‍ನಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿರುವರು ಎಂದು ದ.ಕ ಜಿಲ್ಲಾ ಚುನಾವಣಾ ಸಂಚಾಲಕರಾದ ಶ್ರೀ ಕೆ. ಮೋನಪ್ಪ ಭಂಡಾರಿಯವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.


Spread the love